Breaking News

ಆಮ್ ಆದ್ಮಿ ಪಕ್ಷಕ್ಕೆ ಶಾಶ್ವತ ಮುಖ್ಯಮಂತ್ರಿ ಸಿಕ್ಕರು

Spread the love

ನಟ, ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಇಂದು ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡಿದ್ದಾರೆ. ನಿನ್ನೆಯಷ್ಟೇ ಅವರು ಆಮ್ ಆದ್ಮಿ ಪಾರ್ಟಿ ಸೇರಲಿದ್ದಾರೆ ಎಂದು ಅಧಿಕೃತವಾಗಿ ಪಾರ್ಟಿಯ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಅಲ್ಲದೇ, ಕೆಲವು ದಿನಗಳ ಹಿಂದೆಯಷ್ಟೇ ಚಂದ್ರು ಕೂಡ ಈ ಕುರಿತು ಮಾತನಾಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಕರ್ನಾಟಕ ರಾಜ್ಯ ಆಮ್ ಆದ್ಮಿ ಪಾರ್ಟಿ ಅಧ್ಯಕ್ಷ ಪೃಥ್ವಿ ರೆಡ್ಡಿ, ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ವಕ್ತಾರ ಮತಾಯಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು. ಚಂದ್ರು ಅವರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವ ಕುರಿತು ಮಾತನಾಡಿದರು.

ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಆಗಿದ್ದರು. ಆದರೆ, ಆ ಪಕ್ಷದಲ್ಲಿ ಅವರಿಗೆ ಸೂಕ್ತ ಸ್ಥಾನ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ಇತ್ತೀಚೆಗಷ್ಟೇ ಆ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಆಮ್ ಆದ್ಮಿ ಪಾರ್ಟಿಯ ಸಿದ್ಧಾಂತಗಳು ಇಷ್ಟವಾದ ಕಾರಣದಿಂದಾಗಿ ಈ ಪಕ್ಷವನ್ನು ಸೇರ್ಪಡೆಗೊಂಡಿರುವುದಾಗಿ ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Spread the love ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ