Breaking News

ಕೆಟ್ಟು ನಿಂತ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಿಟ್ಟ ಸ್ಪೇಶಲ್ ಬಸ್

Spread the love

ಇತ್ತೀಚೆಗೆ ಬೆಳಗಾವಿ ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದ ವರೆಗೆ ಹೊಸ ಬಸ್‍ಸೌಲಭ್ಯವನ್ನು ಪ್ರಾರಂಭಿಸಿತ್ತು. ಆದರೆ ಇಂದು ಆ ಸರಕಾರಿ ಬಸ್ ಕೆಟ್ಟು ನಿಂತಿದ್ದು ಕೆಎಸ್‍ಆರ್‍ಟಿಸಿ ಮತ್ತೆ ಡಕೋಟಾ ಬಸ್‍ನ್ನೇ ನೀಡಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇತ್ತೀಚೆ ಬೆಳಗಾವಿಯ ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದ ವರೆಗೆ ಪ್ರಯಾಣಿಕರ ಅನುಕೂಲಕ್ಕಾಗಿ ಕಳೆದ ವಾರವಷ್ಟೇ ಹೊಸ ಬಸ್ ಸೌಲಭ್ಯವನ್ನು ಪ್ರಾರಂಭಿಸಲಾಗಿತ್ತು.

ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ಈ ಬಸ್ ಸೌಲಭ್ಯಕ್ಕೆ ಹಸಿರು ನಿಶಾನೆಯನ್ನು ತೋರಿ ಚಾಲನೆಯನ್ನು ನೀಡಿದ್ದರು. ಆದರೆ ಇಂದು ಬೆಳಗಾವಿ ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಬರುವ ವೇಳೆ ಈ ಹೊಸ ಬಸ್ ಕೆಟ್ಟು ನಿಂತಿದ್ದು, ಬಸ್ ಪ್ರಾರಂಭವಾಗಲಿಲ್ಲ. ಇನ್ನು ಪ್ರಯಾಣಿಕರು ಬಸ್‍ನ್ನು ದೂಡಿ ಪ್ರರಾಂಭಿಸಲು ಪ್ರಯತ್ನ ಮಾಡಿದರಾದರೂ ಕೆಲ ಸಮಯದ ವರೆಗೆ ಪ್ರಾರಂಭವಾಗಲಿಲ್ಲ.

ಆದರೆ ಸಾರ್ವಜನಿಕರು ಈ ಬಸ್‍ಗಳು ಡಕೋಟ ಬಸ್ ಅಂತ ಸಾಬೀತಾಗಿದೆ. ಸಾರಿಗೆ ಇಲಾಖೆ ಎನ್ ಡಬ್ಲ್ಯೂ ಕೆ ಆರ್ ಟಿ ಸಿ ಯಾವಾಗಲೂ ಉತ್ತರ ಕರ್ನಾಟಕ ಭಾಗಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಈ ವೇಳೆ ಬೇಸರ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ