Breaking News

ಆಪ್​ ಸಚಿವನ ಮನೆಯಲ್ಲಿ ಸಿಕ್ಕಿದ ಸಂಪತ್ತು ನೋಡಿ ಇಡಿ ಅಧಿಕಾರಿಗಳೇ ಶಾಕ್​!

Spread the love

ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆಪ್​ ಸಚಿವ ಸತ್ಯೇಂದ್ರ ಜೈನ್​ ಮನೆಯಿಂದ ಭಾರೀ ಸಂಪತ್ತು ಜಪ್ತಿ ಮಾಡಲಾಗಿದೆ.

ಅಕ್ರಮ ಹಣ ವರ್ಗಾವಣೆಯಲ್ಲಿ ಸಚಿವರ ನಿವಾಸದ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ.

ಸೋಮವಾರ ದೆಹಲಿಯ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ 2 ಕೋಟಿ ರೂ. ನಗದು, 1.8 ಕೆ.ಜಿ. ಚಿನ್ನದ ನಾಣ್ಯವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಜೂನ್​ 1 ರಿಂದ 9 ರವರೆಗೆ ಇಡಿ ವಶದಲ್ಲಿರುವುದರಿಂದ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

ಕೋಲ್ಕತ್ತಾ ಮೂಲದ ಕಂಪನಿ ಜತೆಯೂ 4.81 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಚಿವ ಸತ್ಯೇಂದ್ರ ಜೈನ್​ನನ್ನು ಬಂಧಿಸಲಾಗಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ