Breaking News
Home / ರಾಜಕೀಯ / ಛಲವಾದಿ ನಾರಾಯಣಸ್ವಾಮಿಯವರೇ, ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌ ಮನಸ್ಸಿಗೆ ನೋವಾಯಿತು – ಸಿದ್ಧರಾಮಯ್ಯ

ಛಲವಾದಿ ನಾರಾಯಣಸ್ವಾಮಿಯವರೇ, ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌ ಮನಸ್ಸಿಗೆ ನೋವಾಯಿತು – ಸಿದ್ಧರಾಮಯ್ಯ

Spread the love

ಬೆಂಗಳೂರು: ಛಲವಾದಿ ನಾರಾಯಣ ಸ್ವಾಮಿಯವರೇ ( Chalavadi Narayanaswamy ), ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌ ಮನಸ್ಸಿಗೆ ನೋವಾಯಿತು. ನಿಮ್ಮನ್ನು ಪಠ್ಯಪುಸ್ತಕ‌ ಪರಿಷ್ಕರಣ‌ ಸಮಿತಿಯ ಅಧ್ಯಕ್ಷತೆಯಂತಹ ಸ್ಥಾನದಲ್ಲಿ‌ ಕಾಣುವ ಆಸೆ ನನಗೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Ex CM Siddaramaiah ) ವ್ಯಂಗ್ಯವಾಡಿದ್ದಾರೆ.

 

ಈ ಕುರಿತು ಸರಣಿ ಟ್ವಿಟ್ ( Twitter ) ಮಾಡಿರುವ ಅವರು, ಛಲವಾದಿ ನಾರಾಯಣ ಸ್ವಾಮಿಯವರೇ, ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ‌ ಮನಸ್ಥಿತಿಗೆ ನನ್ನ ಧಿಕ್ಕಾರ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

 

 

ಈ ಬಗ್ಗೆ ಸರಣಿ ಟ್ವಿಟ್ ( Twitter ) ಮಾಡಿರುವಂತ ಅವರು, ಆರ್.ಎಸ್.ಎಸ್‌ ಗೆ ( RSS ) ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ, ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ. ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ ಎಂದಿದ್ದಾರೆ


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ