Breaking News

ಜೂನ್ 13ರಂದು ಶಾಲಾ ಕಾಲೇಜುಗಳಿಗೆ ರಜೆ

Spread the love

ಬೆಂಗಳೂರು,ಜೂನ್ 10: ರಾಜ್ಯದ ನಾಲ್ಕು ಸ್ಥಾನಗಳ ವಿಧಾನ ಪರಿಷತ್ ಚುನಾವಣೆ ಜೂನ್ 13ರಂದು ನಡೆಯಲಿದ್ದು. ಎರಡು ಪದವೀಧರ ಕ್ಷೇತ್ರ ಮತ್ತು ಎರಡು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ನಡೆಯಲಿದ್ದು ಜೂನ್ 13ರಂದು ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.

 

ಜೂನ್ 13 ಸೋಮವಾದಂದು ಕರ್ನಾಟಕ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು. ಶಿಕ್ಷಕರು ಮತ್ತು ಪಧವೀಧರರು ಮತದಾನವನ್ನು ಮಾಡುವ ಸಲುವಾಗಿ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಲಾಗಿದೆ.

ಯಾವ ಯಾವ ಜಿಲ್ಲೆಯಲ್ಲಿ ರಜೆ ಸಿಗಲಿದೆ..?

*ಕರ್ನಾಟಕ ವಾಯುವ್ಯ ಪದವೀಧರರ ಕ್ಷೇತ್ರ – ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳು.

*ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರ – ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು.

*ಕರ್ನಾಟಕ ವಾಯುವ್ಯ ಕ್ಷೇತ್ರ ಶಿಕ್ಷಕರ ಕ್ಷೇತ್ರ- ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳು.

*ಕರ್ನಾಟಕ ಪಶ್ಚಿಮ ಕ್ಷೇತ್ರ ಶಿಕ್ಷಕರ ಕ್ಷೇತ್ರ- ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು.

ಕರ್ನಾಟಕದ ವಿಜಯಪುರ, ಬಾಗಲಕೋಟೆ , ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ , ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗಳು ನಡೆಯುತ್ತಿದ್ದು ಮತದಾನದ ಅನೂಕೂಲಕ್ಕಾಗಿ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ.

 


Spread the love

About Laxminews 24x7

Check Also

ಹಬ್ಬದ ಅವಧಿಯಲ್ಲಿ ಗುರಿ ಮೀರಿದ ಸಾಧನೆ; 1,100 ಮೆಟ್ರಿಕ್ ಟನ್ ನಂದಿನಿ ಸಿಹಿ ಉತ್ಪನ್ನ ಮಾರಾಟ: ಸಚಿವ ಕೆ.ವೆಂಕಟೇಶ್

Spread the love ಬೆಂಗಳೂರು: ಈ ಬಾರಿ ಹಬ್ಬದ ಅವಧಿಯಲ್ಲಿ ಗುರಿ ಮೀರಿ ನಂದಿನಿ ಸಿಹಿ ತಿಂಡಿ ಉತ್ಪನ್ನಗಳ ಮಾರಾಟವಾಗಿದೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ