Breaking News

ಬೆಳಗಾವಿಯಲ್ಲಿ ಸ್ಟ್ರಾಂಗ್ ರೂಮ್ ಇರುವುದರಿಂದ ವಿಶೇಷ ಕಾಳಜಿ:ಬೊರಲಿಂಗಯ್ಯ

Spread the love

ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಯ ಎಲ್ಲಾ ಹಂತದಲ್ಲಿಯೂ ವ್ಯಾಪಕ ಬಂದೋಬಸ್ತ್ ಮಾಡಲಾಗುತ್ತದೆ ಎಂದು ನಗರಪೊಲೀಸ್ ಆಯುಕ್ತರಾದ ಡಾ. ಬೊರಲಿಂಗಯ್ಯ ತಿಳಿಸಿದ್ದಾರೆ.

ಬೆಳಗಾವಿ ನಗರದಲ್ಲಿ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಂದೋಬಸ್ತ್ ಕುರಿತಂತೆ ಮಾತನಾಡಿದ ಡಾ. ಬೊರಲಿಂಗಯ್ಯನವರು, ಪರಿಷತ್ ಚುನಾವಣೆ ಹಿನ್ನೆಲೆ ಪೋಲಿಂಗ್ ಡೇದಿಂದಲೇ ಬಂದೋಬಸ್ತ್ ಕಾರ್ಯವನ್ನು ಮಾಡಲಾಗುತ್ತದೆ.

ಬೆಳಗಾವಿ ನಗರದಲ್ಲಿಯೂ ವಿಶೇಷ ಭದ್ರತೆ ಒದಗಿಸಲಾಗುತ್ತದೆ. ಬೆಳಗಾವಿ ಪ್ರಾದೇಶಿಕ ಆಯುಕ್ತರ ಅಧೀನದಲ್ಲಿ ಬರುವ ಎಲ್ಲಾ ಕಡೆ ಬಂದೋಬಸ್ತ್ ಒಂದೆಡೆಯಾದರೆ, ಮಸ್ಟರಿಂಗ ಹಾಗೂ ಡಿ ಮಸ್ಟರಿಂಗ್ ಕಾರ್ಯ ಮುಗಿದ ನಂತರ, ಈ ಮತ ಎಣಿಕೆ ಕಾರ್ಯ ನಡೆಯುವುದರಿಂದ ಬೆಳಗಾವಿಯಲ್ಲಿ ವಿಶೇಷ ಕೌಂಟಿಂಗ್ ಭದ್ರತೆಯನ್ನು ಮಾಡಲಾಗುತ್ತದೆ. ಮತಪೆಟ್ಟಿಗೆ ಹಾಗೂ ಬೆಳಗಾವಿಯಲ್ಲಿ ಸ್ಟ್ರಾಂಗ್ ರೂಮ್ ಇರುವುದರಿಂದ ವಿಶೇಷ ಕಾಳಜಿಯನ್ನು ವಹಿಸಲಾಗುತ್ತದೆ ಎಂದರು.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ