Breaking News

ಹಸೆಮಣೆ ಏರೋದಕ್ಕೆ ಸಜ್ಜಾಗಿದ್ದಾರೆ ಅನುಶ್ರೀ

Spread the love

ಸ್ಯಾಂಡಲ್‌ವುಡ್‌ನ ಖ್ಯಾತ ನಿರೂಪಕಿ ಅನುಶ್ರೀಗೆ ಹಸೆಮಣೆ ಏರೋದಕ್ಕೆ ಸಜ್ಜಾಗಿದ್ದಾರೆ. ಮದುವೆಯಾಗಲೂ ಇದೀಗ ಮನಸ್ಸು ಮಾಡಿದ್ದಾರೆ. ಹಾಗಂತ ಸ್ವತಃ ಅನುಶ್ರೀ ಅವರೇ ಹೇಳಿಕೊಂಡಿದ್ದಾರೆ.

ಸಾಕಷ್ಟು ಸಿನಿಮಾಗಳಿಗೆ ಬಣ್ಣ ಹಚ್ಚಿರುವ ಅನುಶ್ರೀ, ತಮ್ಮ ವಿಭಿನ್ನ ನಿರೂಪಣೆಯ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಮನೆಮಾತಾಗಿದ್ದಾರೆ. ಚಿತ್ರರಂಗದ ಕಾರ್ಯಕ್ರಮಗಳ ಜೊತೆಗೆ ಟಿವಿ ಶೋ ಮುಖಾಂತರ ಅನುಶ್ರೀ, ಅಪಾರ ಅಭಿಮಾನಿಗಳ ಮನಗೆದ್ದಿದ್ದಾರೆ. ಇದೀಗ ಮತ್ತೆ ನಟಿ ಕಮ್ ನಿರೂಪಕಿ ಅನುಶ್ರೀ ಸುದ್ದಿಯಲ್ಲಿದ್ದಾರೆ.

ಈ ಬಾರಿ ಮದುವೆಯ ವಿಚಾರದ ಮೂಲಕ ಗಾಂಧಿನಗರದಲ್ಲಿ ಸದ್ದು ಮಾಡ್ತಿದ್ದಾರೆ. ಅನುಶ್ರೀ ಅವರಿಗೆ ಮದುವೆಯಾಗಲು ಮನಸ್ಸು ಮಾಡಿದ್ದಾರೆ. ಮದುವೆ ಆಗುವುದಕ್ಕೆ ಆಸೆಯಾಗುತ್ತಿದೆ ಅಂತೆ ಹಾಗಂತ ಸ್ವತಃ ತಮ್ಮ ಮನದಾಳದ ಮಾತನ್ನ ಖಾಸಗಿ ಶೋವೊಂದರಲ್ಲಿ ಅನುಶ್ರೀ ಹೇಳಿಕೊಂಡಿದ್ದಾರೆ. ಖಾಸಗಿ ವಾಹಿನಿವೊಂದರಲ್ಲಿ ಜೋಡಿಗಳ ರಿಯಾಲಿಟಿ ಶೋ ನಡೆಯುತ್ತಿದ್ದು, ಆ ಜೋಡಿಗಳ ಪ್ರೀತಿ, ಬಾಂಧವ್ಯ ನೋಡಿ ಶೋನಲ್ಲಿ ತಾನು ಕೂಡ ಮದುವೆಯಾಗಬೇಕು ಅಂತಾ ಆಸೆಯಾಗುತ್ತದೆ ಅಂತಾ ಅನುಶ್ರೀ ಮುಕ್ತವಾಗಿ ಹಂಚಿಕೊಂಡಿದ್ದಾರೆ.


Spread the love

About Laxminews 24x7

Check Also

ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?: ಸಿಎಂ

Spread the loveಮಂಗಳೂರು: “ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?. ನಾವು (ಕಾಂಗ್ರೆಸ್​) ಪಾದಯಾತ್ರೆ ಮಾಡಿರುವುದು ನಿರ್ದಿಷ್ಟ ಕಾರಣಕ್ಕೋಸ್ಕರ” …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ