Breaking News

ಸ್ನೇಹಿತನ ಬರ್ತ್ ಡೇಗೆ ಕ್ಯಾಂಡಲ್ ತರಲು ಹೋದವನ ಮೇಲೆ ಹಲ್ಲೆ

Spread the love

ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಯುವಕನ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ.

ಅರುಣ್ ಹಲ್ಲೆಗೊಳಗಾದ ವ್ಯಕ್ತಿ. ಅರುಣ್ ಸ್ನೇಹಿತನ ಬರ್ತ್ ಡೇ ಅಂಗವಾಗಿ ಕ್ಯಾಂಡಲ್ ತರಲು ಹೋಗಿದ್ದ. ಬಾಗೇಪಲ್ಲಿಯ ಮುಖ್ಯ ರಸ್ತೆಯ ಬಾರ್ ಬಳಿ ತನ್ನ ಸ್ನೇಹಿತ ರವಿ ನೋಡಿ ಮಾತನಾಡಲು ಬೈಕ್ ನಿಲ್ಲಿಸಿದ್ದಾನೆ.

ಈ ವೇಳೆ ರವಿ ಜೊತೆ ಸಲುಗೆಯಿಂದ ಅವಾಚ್ಯ ಶಬ್ದ ಬಳಸಿ ಮಾತನಾಡಿದ್ದನ್ನು ಕಂಡ ರವಿಯ ಭಾವ ಯಾಕೆ ಅವಾಚ್ಯ ಪದ ಬಳಸ್ತೀಯಾ ಅಂತ ಮಾತಿಗೆ ಮಾತು ಬೆಳೆದು ಗಲಾಟೆ ಮಾಡಿದ್ದಾನೆ. ಈ ವೇಳೆ ರವಿಯ ಭಾವ ಕೈಯಲ್ಲಿದ್ದ ಬಿಯರ್ ಬಾಟಲಿಯಿಂದ ತಲೆಗೆ ಹಲ್ಲೆ ಮಾಡಿದ್ದಾನೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ