Breaking News

ಸಿಎಂ ಬೊಮ್ಮಾಯಿ ಸಿನಿಮಾ ನೋಡಿ ಕಣ್ಣೀರು ಹಾಕಿದರೆ, ಜನ ಅವರ ಸರಕಾರ ನೋಡಿ ಕಣ್ಣೀರಿಡುತ್ತಿದ್ದಾರೆ

Spread the love

ಮೊನ್ನೆಯಷ್ಟೇ ರಕ್ಷಿತ್ ಶೆಟ್ಟಿ ನಟನೆಯ ‘ಚಾರ್ಲಿ 777’ ಸಿನಿಮಾ ನೋಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮಗಳ ಮುಂದೆ ಭಾವುಕರಾಗಿ ಆ ಸಿನಿಮಾದ ಬಗ್ಗೆ ಮಾತನಾಡಿದ್ದರು. ಕೆಲ ತಿಂಗಳ ಹಿಂದೆ ನಿಧನ ಹೊಂದಿದ್ದ ತಮ್ಮ ಮನೆಯ ನಾಯಿಯನ್ನು ನೆನಪಿಸಿಕೊಂಡಿದ್ದರು. ಚಾರ್ಲಿ ಸಿನಿಮಾ ನೋಡಿ ಅತ್ತ ಬೊಮ್ಮಾಯಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಕುರಿತು ನಟ, ಸಾಮಾಜಿಕ ಹೋರಾಟಗಾರ ಚೇತನ್ ವ್ಯಂಗ್ಯವಾಡಿದ್ದಾರೆ.

ಸಿಎಂ ಬೊಮ್ಮಾಯಿ ಅವರು ಕಣ್ಣೀರಿಟ್ಟ ವಿಡಿಯೋ ನೋಡಿರುವ ಚೇತನ್, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ “ಕನ್ನಡ ಚಿತ್ರವೊಂದನ್ನು ತೆರೆ ಮೇಲೆ ನೋಡಿ ಸಿಎಂ ಬೊಮ್ಮಾಯಿ ಅವರು ಕಣ್ಣೀರು ಹಾಕಿದರೆ, ಬೊಮ್ಮಾಯಿ ಅವರ ಆಡಳಿತವನ್ನು ನೋಡಿ ಕರ್ನಾಟಕದ ಜನತೆ ಕಣ್ಣೀರು ಹಾಕುತ್ತಿದ್ದಾರೆ’ ಎಂದು ಬರೆದು ವ್ಯಂಗ್ಯವಾಡಿದ್ದಾರೆ.

ಈ ಪೋಸ್ಟ್ ಹಾಕಿದ ಚೇತನ್ ಗೆ ಕೆಲವರು ತರಾಟೆಗೆ ತಗೆದುಕೊಂಡಿದ್ದರೆ, ಇನ್ನೂ ಕೆಲವರು ಮೆಚ್ಚುಗೆ ಸೂಚಿಸಿದ್ದಾರೆ. 


Spread the love

About Laxminews 24x7

Check Also

ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – ಮಂಜುನಾಥ ಮಹಾರಾಜ.

Spread the loveಹುಕ್ಕೇರಿ : ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ