Breaking News

ಹಾವೇರಿ:ನಮ್ಮನ್ನ ನಮ್ಮ ನಮ್ಮ ಊರಿಗೆ ತಲುಪಿಸಿ……

Spread the love

ಹಾವೇರಿ: ಜಿಲ್ಲೆಯಿಂದ ಕೆಲಸ ಅರಸಿಕೊಂಡು ಕೇರಳ ರಾಜ್ಯದ ಕಣ್ಣೂರು ಜಿಲ್ಲೆಗೆ ದುಡಿಯಲು ಹೋಗಿದ್ದ 40ಕ್ಕೂ ಅಧಿಕ ಕಾರ್ಮಿಕರು ಊರಿಗೆ ಬರಲಾಗದೆ ಪರದಾಡ್ತಿದ್ದಾರೆ.

ಕಣ್ಣೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ವಾಸವಾಗಿರೋ ಕಾರ್ಮಿಕರು ಲಾಕ್ ಡೌನ್ ನಂತರ ರಾಜ್ಯಗಳ ಗಡಿ ಬಂದ್ ಆಗಿದ್ದರಿಂದ ಊರಿಗೆ ಬರಲು ಪರದಾಡ್ತಿದ್ದಾರೆ. ಅಲ್ಲದೆ ಲಾಕ್ ಡೌನ್ ನಂತರ ಕೆಲಸವೂ ಇಲ್ಲದೆ ಇದ್ದ ಹಣವೂ ಖರ್ಚಾಗಿದೆ. ಊಟಕ್ಕೆ ಬೇಕಾದ ಪದಾರ್ಥಗಳು ಖಾಲಿ ಆಗಿವೆ.

ಹೀಗಾಗಿ ನಮ್ಮನ್ನ ನಮ್ಮ ನಮ್ಮ ಊರಿಗೆ ತಲುಪಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಸಿಎಂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ. ಮೊಬೈಲ್ ನಲ್ಲಿ ವಿಡಿಯೋ ಮಾಡಿ ಹರಿಬಿಡೋ ಮೂಲಕ ಸಿಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಊರಿಗೆ ತಲುಪಿಸುವಂತೆ ಕೇಳಿಕೊಳ್ತಿದ್ದಾರೆ.


Spread the love

About Laxminews 24x7

Check Also

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – 4 ಲಕ್ಷ ರೂ. ಮೌಲ್ಯದ ಜೋಳ ಸುಟ್ಟು ಭಸ್ಮ

Spread the love ಹಾವೇರಿ: 8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ  ರಾಶಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮೆಕ್ಕೆಜೋಳದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ