Breaking News
Home / Uncategorized / ಮೋದಿ ಭೇಟಿ ಹಿನ್ನೆಲೆ ಶಾಲೆ ಬಂದ್‌: ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ

ಮೋದಿ ಭೇಟಿ ಹಿನ್ನೆಲೆ ಶಾಲೆ ಬಂದ್‌: ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ

Spread the love

ಜೂ. 20: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಬೆಂಗಳೂರಿನಲ್ಲಿ ಐಐಎಸ್‌ಸಿ ಹಾಗೂ ಡಾ. ಬಿ. ಆರ್‌. ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ ಕಟ್ಟಡ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಮೋದಿ ಭೇಟಿ ಹಿನ್ನಲೆಯಲ್ಲಿ ಸೋಮವಾರ ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಟೀಕಿಸಿದ್ದಾರೆ.

 

ಪ್ರಧಾನಿ ಮೋದಿಯವರ ಭೇಟಿಯಿಂದಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಶಾಲೆಗಳನ್ನು ಮುಚ್ಚಿರುವುದು ಸಮರ್ಥನೀಯವೇ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರು ಆಗಿರುವ ಅಂಜಲಿ ಪ್ರಶ್ನಿಸಿದ್ದಾರೆ. ಕರ್ನಾಟಕದಲ್ಲಿ ಶಿಕ್ಷಣ ಎಂತಹ ತಮಾಷೆಯಾಗಿದೆ ಎಂದು ಅವರು ಲೇವಡಿ ಮಾಡಿದ್ದಾರೆ.

 

ಅಂಜಲಿ ನಿಂಬಾಳ್ಕರ್‌ ತಮ್ಮ ಟ್ವಿಟರ್ ಪೋಸ್ಟ್‌ನಲ್ಲಿ ಟ್ರಾಫಿಕ್ ಜಾಮ್‌ ಆಗುವ ಕಾರಣವನ್ನು ಉಲ್ಲೇಖಿಸಿ ಪ್ರಧಾನಿಗಳ ಭೇಟಿಯಿಂದಾಗಿ ಬೆಂಗಳೂರಿನಲ್ಲಿ ಸೋಮವಾರ ಶಾಲೆಗಳನ್ನು ಬಂದ್‌ ಮಾಡಿಸಲಾಗಿದೆ. ಇದು ಸಹ ಸಮರ್ಥನೆಯೇ? ವಿದ್ಯಾವಂತ ವರ್ಗ ಎಂದು ಕರೆಯಲ್ಪಡುವವರು ಇದನ್ನು ಹೇಗೆ ಸಹಿಸಿಕೊಳ್ಳುತ್ತಿದ್ದಾರೆ? ಕರ್ನಾಟಕದಲ್ಲಿ ಶಿಕ್ಷಣ ಎಂತಹ ತಮಾಷೆಯಾಗಿದೆ? ಜೂನ್ 20 ಸೋಮವಾರದಂದು ಬೆಂಗಳೂರಿನಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

 

https://twitter.com/DrAnjaliTai/status/1538732697446625280/photo/1


Spread the love

About Laxminews 24x7

Check Also

ಶೂ ವ್ಯಾಪಾರಿ ನಿವಾಸದಲ್ಲಿ ಬರೋಬ್ಬರಿ 40 ಕೋಟಿ ರೂ. ನಗದು ವಶಕ್ಕೆ IT RAID

Spread the love ಉತ್ತರ ಪ್ರದೇಶದ ಆಗ್ರಾದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯ ಫಲವಾಗಿ 40 ಕೋಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ