Breaking News

 15 ವರ್ಷಗಳ ಹಿಂದೆ ಗ್ಯಾಂಗ್‌ಸ್ಟಾರ್ ಪ್ರವೀಣ ಶಿಂತ್ರೆಯನ್ನು ಎನ್‌ಕೌಂಟರ್ ಮಾಡಿದ ಬಳಿಕ ಈಗ ಬೆಳಗಾವಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು

Spread the love

ಬೆಳಗಾವಿ: 15 ವರ್ಷಗಳ ಹಿಂದೆ ಗ್ಯಾಂಗ್‌ಸ್ಟಾರ್ ಪ್ರವೀಣ ಶಿಂತ್ರೆಯನ್ನು ಎನ್‌ಕೌಂಟರ್ ಮಾಡಿದ ಬಳಿಕ ಈಗ ಬೆಳಗಾವಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮಾರ್ದನಿಸಿದ್ದು, ಕೊಲೆ, ಸುಲಿಗೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಮಂಗಳವಾರ ಬೆಳಗಿನ ಜಾವ ನಗರದ ಧರ್ಮನಾಥ ಭವನ ಸಮೀಪ ಪೊಲೀಸರ ಮೇಲೆ ಅಟ್ಯಾಕ್ ಮಾಡಲು ಮುಂದಾದಾಗ ಪೊಲೀಸರು ಗುಂಡು ಹಾರಿಸುವ ಮೂಲಕ ಆತನನ್ನು ಹೆಡೆಮುರಿ ಕಟ್ಟಿದ್ದಾರೆ.

 

ಮೂಲತಃ ಕಿತ್ತೂರು ತಾಲೂಕಿನ ಚಿಕ್ಕನಂದಿ ಗ್ರಾಮದ ಸದ್ಯ ಶಾಸ್ತ್ರಿ ನಗರದ ನಿವಾಸಿ ವಿಶಾಲಸಿಂಗ್ ವಿಜಯಸಿಂಗ್ ಚವ್ಹಾಣ(25) ಎಂಬ ಆರೋಪಿಯ ಕಾಲಿಗೆ ಗುಂಡು ಹಾರಿಸಲಾಗಿದ್ದು, ಈತನ ಮೊಣಕಾಲಿಗೆ ಗುಂಡು ಹೊಡೆಯಲಾಗಿದೆ. ಗಂಭೀರ ಗಾಯಗೊಂಡ ಈತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಹಾಗೂ ಅವರ ತಂಡ ಗುಂಡಿನ ದಾಳಿ ನಡೆಸಿದೆ. ಹಲವು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ವಿಶಾಲಸಿಂಗ್ ಪೊಲೀಸರ ಮೇಲೆಯೇ ದಾಳಿ ನಡೆಸಲು ಯತ್ನಿಸಿದ್ದಾನೆ. ಕೂಡಲೇ ಪೊಲೀಸರು ಈತನ ಮೇಲೆ ಗುಂಡು ಹಾರಿಸಿ ಸಾಹಸ ಮೆರೆದಿದ್ದಾರೆ. ಈ ಮೂಲಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಸಮಾಜದಲ್ಲಿ ಅಶಾಂತಿ ಭಂಗವನ್ನುಂಟು ಮಾಡುತ್ತಿದ್ದವರಿಗೆ ತಕ್ಕ ಪಾಠ ಕಲಿಸಿದೆ.

 

ಶೀತಲ ಚೌಗುಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರವೀಣ ಶಿಂತ್ರೆಯನ್ನು 6 ಸೆಪ್ಟೆಂಬರ್ 2007ರಂದು ಬೆಳಗಿನ ಜಾವ ಬೆಳಗಾವಿಯ ಲಕ್ಷ್ಮೀ ನಗರದ ರಾಜದೀಪ ಬಂಗ್ಲೆಯಲ್ಲಿ ಎನ್‌ಕೌಂಟರ್ ಮಾಡಲಾಗಿತ್ತು. ಈಗ ಅದೇ ರೀತಿಯಲ್ಲಿ ಬೆಳಗಾವಿಯಲ್ಲಿ ಇನ್ನೊಂದು ಗುಂಡಿನ ದಾಳಿ ಆಗಿದ್ದು, ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದವರಿಗೆ ನಡುಕ ಹುಟ್ಟಿಸಿದೆ.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ