Breaking News

ಗೌಂಡವಾಡ ಮರ್ಡ್‍ರ್ ಪ್ರಕರಣ ಮತ್ತೆ ಮೂವರ ಅರೆಸ್ಟ್: ಡಿಸಿ ಕಚೇರಿ ಬಳಿ ಮೃತ ಕುಟುಂಬಸ್ಥರ ಆಕ್ರಂದನ

Spread the love

ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಸತೀಶ್ ಪಾಟೀಲ ಹತ್ಯೆ ಹಾಗೂ ಬಳಿಕ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಧಿಸಿದಂತೆ ಮತ್ತೆ ಮೂವರು ಆರೋಪಿಗ¼ನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬಂಧಿತರ ಸಂಖ್ಯೆ 32 ಕ್ಕೆ ಏರಿಕೆಯಾಗಿದೆ.

ಜೂನ್ 18ರಂದು ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಸತೀಶ್ ಪಾಟೀಲ ಹತ್ಯೆ ಯಾಗಿತ್ತು. ಇನ್ನು ಹತ್ಯೆಯನ್ನು ಖಂಡಿಸಿ ಗ್ರಾಮದಲ್ಲಿ ರಾತ್ರಿವೇಳೆ ಹಿಂಸಾಚಾರವೂ ಕೂಡ ನಡೆದಿತ್ತು. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಕೊಲೆ ಬಳಿಕ ನಡೆದ ಹಿಂಸಾಚಾರ ಪ್ರಕರಣ ಸಂಬಂಧ 22 ಆರೋಪಿಗಳ ಬಂಧನವಾಗಿದೆ. ಒಟ್ಟಾರೆ ಕೊಲೆ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ಸಧ್ಯ 32ಕ್ಕೆ ಏರಿಕೆಯಾಗಿದೆ.

ಈ ಸಂಬಂಧ ಪೊಲೀಸರು, ಆನಂದ ಕುಟ್ರೆ (60), ಜಾಯಪ್ಪ ನೀಲಜಕರ (52) ಸುರೇಖಾ ನೀಲಜಕರ (47) ಸಂಜನಾ ನೀಲಜಕರ (21) ವೆಂಕಟೇಶ ಕುಟ್ರೆ (50) ದೌಲತ್ ಮುತಗೇಕರ (21) ಲಖನ್ ನೀಲಜಕರ (25) ಲಕ್ಷ್ಮಿ ಕುಟ್ರೆ (45) ಸಂಗೀತಾ ಕುಟ್ರೆ (45) ಶಶಿಕಲಾ ಕುಟ್ರೆ (50) ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ ಗೌಂಡವಾಡ ಗ್ರಾಮದ ನಿವಾಸಿಗಳಾಗಿದ್ದಾರೆ.

ಗೌಂಡವಾಡ ಗ್ರಾಮದ ಸತೀಶ ಪಾಟೀಲ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಬುಧವಾರ ಮೃತ ಸತೀಶ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಹಲಾವರು ವರ್ಷಗಳಿಂದ ಸತೀಶ ದೇವಸ್ಥಾನದ ಜಮೀನು ಕಬಳಿಕೆ ಮಾಡುವವರ ವಿರುದ್ಧ ಹೋರಾಟ ನಡೆಸಿಕೊಂಡು ಬರುತ್ತಿದ್ದ ಇದನ್ನು ಸಹಿಸದ ಕೆಲ ಕಿಡಿಗೇಡಿಗಳು ಸತೀಶ ಪಾಟೀಲನನ್ನು ಕೊಲೆ ಮಾಡಿದ್ದಾರೆ. ಕೊಲೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸತೀಶ್ ಪಾಟೀಲ್ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಗ್ರಹಿಸಿದರು. ಇನ್ನು ಈ ವೇಳೆ ತನಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸುವಂತೆ ಸತೀಶ್ ಪಾಟೀಳ್ ಪತ್ನಿ ಗೋಳಾಡಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ