Breaking News
Home / ರಾಜಕೀಯ / ಹಂಪ್‌ ಹಾರಿಸಿದ ಚಾಲಕ: ಕಂಡಕ್ಟರ್ ಕಾಲು ಕಟ್‌

ಹಂಪ್‌ ಹಾರಿಸಿದ ಚಾಲಕ: ಕಂಡಕ್ಟರ್ ಕಾಲು ಕಟ್‌

Spread the love

ಕುಣಿಗಲ್: ಕೆಎಸ್ ಆರ್ ಟಿಸಿ ಬಸ್ ಚಾಲಕ ರಸ್ತೆ ಹಂಪ್‌ ನಲ್ಲಿ ಅಜಾಗರೂಕತೆಯಿಂದ ಚಲಾಯಿಸದ ಕಾರಣ ನಿರ್ವಾಹಕನ ಕಾಲು ಮುರಿದ ಘಟನೆ ತಾಲೂಕಿನ ಹಳೇಯ ರಾಷ್ಟ್ರೀಯ ಹೆದ್ದಾರಿ 48 ಗೊಟ್ಟಿಕೆರೆ ಸಮೀಪ ಶುಕ್ರವಾರ ನಡೆದಿದೆ.

ಕೋಲಾರ ವಿಭಾಗದ ಬಸ್ ನಿರ್ವಾಹಕ ಸಂಗಪ್ಪ ಹಕ್ಕಿ (45) ಕಾಲು ಮುರಿದುಕೊಂಡ ನಿರ್ವಾಹಕ.

 

ಘಟನೆ ವಿವರ : ಶುಕ್ರವಾರ ಧರ್ಮಸ್ಥಳದಿಂದ ಹೊರಟ ಬಸ್ ಕುಣಿಗಲ್ ಮಾರ್ಗವಾಗಿ ಕೊಲಾರಕ್ಕೆ ತೆರಳುತ್ತಿತ್ತು. ಈ ವೇಳೆ ತಾಲೂಕಿನ ಗೊಟ್ಟಿಕೆರೆ ಬಳಿ ಚಾಲಕ ಮಹತೇಶ್ ಏಕಾಏಕಿ ಹಂಪ್‌ ಹಾರಿಸಿದ ಕಾರಣ ಬಸ್ ನಲ್ಲಿ‌ ನಿಂತಿದ್ದ ಸಂಗಪ್ಪನ ಕಾಲಿನ ಮೂಳೆ ಮುರಿತಕ್ಕೊಳಗಾಗಿದೆ.

ಕೂಡಲೇ ಗಾಯಾಳುವನ್ನು ಕುಣಿಗಲ್‌ ಸರ್ಕಾರಿ ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ.


Spread the love

About Laxminews 24x7

Check Also

ಚಿಕ್ಕೋಡಿ: ಹಾವು ಕಚ್ಚಿ ಬಾಲಕಿ ಸಾವು

Spread the love ಚಿಕ್ಕೋಡಿ: ತಾಲ್ಲೂಕಿನ ಕೇರೂರವಾಡಿಯಲ್ಲಿ ಶುಕ್ರವಾರ ರಾತ್ರಿ ಹಾವು ಕಚ್ಚಿ 4 ವರ್ಷದ ಬಾಲಕಿ ಶಿವಾನಿ ತುಳಸಿಗೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ