Breaking News

ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಕ್ರಯ ಪತ್ರ ಹಸ್ತಾಂತರಿಸಿದ C.M. ಬೊಮ್ಮಾಯಿ

Spread the love

ಬೆಂಗಳೂರು: ಸುಮಾರು 8000 ಕ್ಕೂ ಹೆಚ್ಚು ಮರಗಳಿಗೆ ತಾಯಿ ಸ್ವರೂಪವಾಗಿರುವ ಸಾಲುಮರದ ತಿಮ್ಮಕ್ಕಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು.

 

ಕೆಲ ದಿನಗಳ ಹಿಂದಷ್ಟೇ ಸಿಎಂ ಬೊಮ್ಮಾಯಿ ಅವರನ್ನು ತಿಮ್ಮಕ್ಕ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದಾದ ಬಳಿಕ ಸಿಎಂ ಸೂಚನೆ ಮೇರೆಗೆ ಬಿಡಿಎ, ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕಳಿಗೆ ನೀಡಿತ್ತು. ಇಂದು (ಜೂನ್​ 25) ಮುಂಜಾನೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಸಿಎಂ ಕರಾರು ಪತ್ರವನ್ನು ವಿತರಣೆ ಮಾಡಿದರು.

ಸಿಎಂ ಸೂಚನೆ ಮೇರೆಗೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಸಾಲುಮರದ ತಿಮ್ಮಕ್ಕ ಅವರಿಗೆ ಬುಧವಾರ ನಿವೇಶನ ಪತ್ರ ವಿತರಿಸಿದರು. ಈ ವೇಳೆ ಬಿಡಿಎ ಕಾರ್ಯದರ್ಶಿ ಆನಂದ್, ಉಮೇಶ್, ಆಯುಕ್ತ ರಾಜೇಶ್‌ಗೌಡ, ಉಪಕಾರ್ಯದರ್ಶಿ ಮಧು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆಯ ಮೇರೆಗೆ ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್‌ನಲ್ಲಿ ನಿವೇಶನವನ್ನು ಗುರುತಿಸಿ ವಿತರಿಸಲಾಗುತ್ತಿದೆ ಎಂದು ವಿಶ್ವನಾಥ್ ಅವರು ಹೇಳಿದ್ದಾರೆ. ತಿಮ್ಮಕ್ಕಳಿಗೆ ಒಟ್ಟು 50×80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ