Breaking News

ಬೇರೆಯಾಗಲು ಬಂದು ಒಂದಾಗಿ ಮರಳಿದ ದಂಪತಿ: ನ್ಯಾಯಾಧೀಶರಿಂದಲೇ ರಾಜಿ ಸಂಧಾನ!

Spread the love

ಧಾರವಾಡ: ದಿನನಿತ್ಯ ಸಾವಿರಾರು ವಿಚ್ಛೇದನ ಪ್ರಕರಣಗಳು ಕೌಟುಂಬಿಕ ನ್ಯಾಯಾಲಯದಲ್ಲಿ ದಾಖಲಾಗುತ್ತಿವೆ. ಮದುವೆಯಾದ ತಿಂಗಳ ಒಳಗೇ ವಿಚ್ಚೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿರುವ ಪ್ರಕರಣಗಳೂ ಇವೆ.

ಆದರೆ ಇಲ್ಲೊಂದು ಅಪರೂಪದಲ್ಲಿ ಅಪರೂಪ ಪ್ರಕರಣವೊಂದು ನಡೆದಿದ್ದು, ವಿಚ್ಛೇದನಕ್ಕೆ ಬಂದ ಗಂಡ-ಹೆಂಡತಿಯನ್ನು ನ್ಯಾಯಾಧೀಶರೇ ಒಂದು ಮಾಡಿದ್ದಾರೆ.ಧಾರವಾಡ ಕೌಟುಂಬಿಕ ನ್ಯಾಯಾಲಯದಲ್ಲಿ ಅಪರೂಪದ ರಾಜಿ ಸಂಧಾನಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಉಮೇಶ ಅಡಿಗ ಅವರು ಸಾಕ್ಷಿಯಾಗಿದ್ದಾರೆ.

 

ನಾಲ್ಕು ಮಕ್ಕಳಾದ ಬಳಿಕ ಗಂಡ ಹೆಂಡತಿಯಲ್ಲಿ ಬಂದಿದ್ದ ವೈಮನಸ್ಸು, 12 ವರ್ಷದ ದಾಂಪತ್ಯದಲ್ಲಿ ಬಿರುಕು ಉಂಟಾಗಿತ್ತು, ಬಾದಾಮಿ ತಾಲೂಕಿನ ನೀರಲಕೇರಿಯ ಯಲ್ಲಪ್ಪ ಕುರಿ ಹಾಗೂ ಪತ್ನಿ ಸುಧಾ ನಡುವೆ ಮನಸ್ತಾಪ ವ್ಯಕ್ತವಾಗಿತ್ತು.ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಕಾಲವಾಡ ಗ್ರಾಮದಲ್ಲಿನ ತವರು ಮನೆಯಲ್ಲಿ ಹೊಗಿದ್ದ ಸುಧಾ, ಗಂಡನೊಂದಿಗಿನ ಜಗಳದಿಂದ ಆತ್ಮಹತ್ಯೆಗೂ ಯತ್ನಿಸಿದ್ದರು.

ಅತ್ಮಹತ್ಯೆ ಯತ್ನದ ಬಳಿಕ ಧಾರವಾಡ ಸ್ವಾಧಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದರು. ಕೊನೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನೆರವು ಪಡೆದು, ಗಂಡನ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದರು. ಸದ್ಯ ಲೋಕ್​ ಅದಾಲತ್​​ನಲ್ಲಿ ಇಬ್ಬರನ್ನೂ ನ್ಯಾಯಾಧೀಶರೇ ಒಂದು ಮಾಡಿದ್ದಾರೆ. 


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ