ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಮೋದಿ@ 20 ಕೃತಿಯನ್ನು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಲೋಗನಾಥನ್ ಮುರುಗನ್, ಸಚಿವರಾದ ಸೋಮಣ್ಣ, ಬಿ ಸಿ ಪಾಟೀಲ್, ಅಶ್ವಥನಾರಾಯಣ, ಸುನಿಲ್ ಕುಮಾರ್ , ಶಾಸಕ ಉದಯ್ ಗರುಡಾಚಾರ್, ಕನ್ನಡ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಡಾ. ಸಿ. ಸೋಮಶೇಖರ, ಇನ್ಫೋಸಿಸ್ ಸಂಸ್ಥೆಯ ಸುಧಾ ಮೂರ್ತಿ , ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನೂರಾಧಾ ಮತ್ತು ಇತರರು ಉಪಸ್ಥಿತರಿದ್ದರು.