Breaking News

ಬೆಳಗಾವಿ ಬಳಿ ಕ್ರೂಸರ್ ಪಲ್ಟಿ ಪ್ರಕರಣ: ಮೃತರ ಸಂಖ್ಯೆ 8ಕ್ಕೆ ಏರಿಕೆ

Spread the love

ಬೆಳಗಾವಿ: ಬೆಳಗಾವಿ ತಾಲೂಕಿನ ಕಲ್ಯಾಳ್ ಸೇತುವೆ ಬಳಿ ಭಾನುವಾರ ಸಂಭವಿಸಿದ್ದ ಭೀಕರ ಅಪಘಾತ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೋರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಈ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿದೆ. ಕಿರಣ್ ಅಶೋಕ್ ಕಳಸಣ್ಣವರ್ ಮೃತ ಕಾರ್ಮಿಕ.

ಮೃತ ಕಿರಣ್ ಗೋಕಾಕ್ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದ ನಿವಾಸಿಯಾಗಿದ್ದಾರೆ. ಭಾನುವಾರ ಬೆಳಗ್ಗೆ ಕಳ್ಯಾಳ್ ಸೇತುವೆ ಬಳಿ ಕ್ರೂಸರ್ ಪಲ್ಟಿಯಾಗಿ ಭೀಕರ ಅಪಘಾತ ನಡೆದಿತ್ತು. ಸ್ಥಳದಲ್ಲೇ 7 ಮಂದಿ ಕಾರ್ಮಿಕರು ಮೃತಪಟ್ಟು, 14 ಜನ ಕಾರ್ಮಿಕರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಿರಣ್​ ಅವರನ್ನು ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಕಿರಣ್ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ