Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ ಬಳಿ ಕ್ರೂಸರ್ ಪಲ್ಟಿ ಪ್ರಕರಣ: ಮೃತರ ಸಂಖ್ಯೆ 8ಕ್ಕೆ ಏರಿಕೆ

ಬೆಳಗಾವಿ ಬಳಿ ಕ್ರೂಸರ್ ಪಲ್ಟಿ ಪ್ರಕರಣ: ಮೃತರ ಸಂಖ್ಯೆ 8ಕ್ಕೆ ಏರಿಕೆ

Spread the love

ಬೆಳಗಾವಿ: ಬೆಳಗಾವಿ ತಾಲೂಕಿನ ಕಲ್ಯಾಳ್ ಸೇತುವೆ ಬಳಿ ಭಾನುವಾರ ಸಂಭವಿಸಿದ್ದ ಭೀಕರ ಅಪಘಾತ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೋರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಈ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿದೆ. ಕಿರಣ್ ಅಶೋಕ್ ಕಳಸಣ್ಣವರ್ ಮೃತ ಕಾರ್ಮಿಕ.

ಮೃತ ಕಿರಣ್ ಗೋಕಾಕ್ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದ ನಿವಾಸಿಯಾಗಿದ್ದಾರೆ. ಭಾನುವಾರ ಬೆಳಗ್ಗೆ ಕಳ್ಯಾಳ್ ಸೇತುವೆ ಬಳಿ ಕ್ರೂಸರ್ ಪಲ್ಟಿಯಾಗಿ ಭೀಕರ ಅಪಘಾತ ನಡೆದಿತ್ತು. ಸ್ಥಳದಲ್ಲೇ 7 ಮಂದಿ ಕಾರ್ಮಿಕರು ಮೃತಪಟ್ಟು, 14 ಜನ ಕಾರ್ಮಿಕರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಿರಣ್​ ಅವರನ್ನು ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಕಿರಣ್ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ