Breaking News

ರಾಜ್ಯದಲ್ಲಿ ಹೆಚ್ಚಿದ ಕೊರೊನಾ ಪ್ರಕರಣ; ಹೊಸ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ

Spread the love

ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿಯನ್ನು ಅನುಸರಿಸುವಂತೆ ತಿಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿಯನ್ನು ಅನುಸರಿಸುವಂತೆ ತಿಳಿಸಿದೆ. ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಹಿನ್ನಲೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.

ಮಾರ್ಗಸೂಚಿಯಲ್ಲಿ ಒಳಗೊಂಡಿರುವ ಅಂಶಗಳು

    1. ಶಾಲೆಗಳಲ್ಲಿ ಕೋವಿಡ್ ಲಕ್ಷಣಗಳಿದ್ದರೆ ರಜೆ ನೀಡಬೇಕು
    2. ಶೀತ, ಕೆಮ್ಮು, ಜ್ವರ ಇದ್ದರೆ ಕಡ್ಡಾಯವಾಗಿ ರಜೆ ನೀಡಬೇಕು
    3. ಮಕ್ಕಳು ಜ್ವರ, ಶೀತ, ಕಡಿಮೆ ಆಗುವ ತನಕ ಶಾಲೆಗೆ ಬರುವುದು ಬೇಡ ಎಂದು ಸೂಚಿಸಿರುವ ಆರೋಗ್ಯ ಇಲಾಖೆ
    4. ಒಂದು ವೇಳೆ ಸೋಂಕು ದೃಢಪಟ್ಟರೆ ಶಾಲಾ ಕೊಠಡಿಯನ್ನ ಸ್ಯಾನಿಟೈಸ್ ಮಾಡಬೇಕು
    5. ಕೊರೋನಾ ಸೋಂಕು ದೃಢಪಟ್ಟಿರುವುದು ಶಾಲೆಗಳು ಮುಚ್ಚಿಡುವಂತಿಲ್ಲ
    6. ಒಂದು ವೇಳೆ ಆ ರೀತಿ ಮಾಡಿದರೆ ಶಾಲೆ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ‌ಇಲಾಖೆ ಆಯುಕ್ತ ಡಾ. ಡಿ. ರಂದೀಪ್ ಹೇಳಿದ್ದಾರೆ.

Spread the love

About Laxminews 24x7

Check Also

ಮಂಗಳೂರು ಏರ್ಪೋರ್ಟ್‌ನಲ್ಲಿ ಕೆ.ಸಿ.ವೇಣುಗೋಪಾಲ್ ಎದುರು ಡಿಕೆಶಿ​ ಪರ ಘೋಷಣೆ

Spread the loveಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ