Breaking News

ರಸ್ತೆ ಅಪಘಾತದಲ್ಲಿ ಲಾರಿಯ ಮುಂಭಾಗದ ಚಕ್ರದಿಂದ ಯುವತಿ ಜಸ್ಟ್ ಮಿಸ್ ಆ

Spread the love

ಬೆಳಗಾವಿ: ರಸ್ತೆ ಅಪಘಾತದಲ್ಲಿ ಲಾರಿಯ ಮುಂಭಾಗದ ಚಕ್ರದಿಂದ ಯುವತಿ ಜಸ್ಟ್ ಮಿಸ್ ಆಗಿರುವ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕ್ಷಣಾರ್ಧದಲ್ಲಿ ಯುವತಿಯ ಪ್ರಾಣ ಉಳಿದಿರುವ ಘಟನೆ ತಾಲೂಕಿನ ಗಣೇಶಪುರದಲ್ಲಿ ನಡೆದಿದೆ.

ಗಣೇಶಪುರ ರಸ್ತೆಯಲ್ಲಿ ಸ್ಕೂಟಿ ಮೇಲೆ ತೆರಳುತ್ತಿರುವಾಗ ಯುವತಿಗೆ ನಾಯಿ ಅಡ್ಡ ಬಂದಿದೆ. ಈ ವೇಳೆ ವೇಗ ನಿಯಂತ್ರಣಕ್ಕೆ ಬಾರದೇ ಸ್ಕೂಟಿ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ‌. ಇತ್ತ ಹಿಂಬದಿಯಿಂದ ಬರುತ್ತಿದ್ದ ಲಾರಿ ಚಾಲಕ, ತಕ್ಷಣ ಬ್ರೇಕ್ ಹಾಕಿ ಲಾರಿಯನ್ನು ನಿಲ್ಲಿಸಿದ್ದಾನೆ.

ಚಾಲಕನ ಸಮಯಪ್ರಜ್ಞೆಯಿಂದ ಕ್ಷಣಾರ್ಧದಲ್ಲಿ ಯುವತಿಯ ಪ್ರಾಣ ಉಳಿದಿದ್ದು, ಅಪಘಾತದ ಭಯಾನಕ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಬೆಳಗಾವಿ ದಕ್ಷಿಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ