Breaking News

ಸರ್ಕಾರಿ ಮತ್ತು  ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ  50ಕ್ಕೂ ಹೆಚ್ಚು ಜನರು ಗಾಯ

Spread the love

ಶಿವಮೊಗ್ಗ: ಸರ್ಕಾರಿ (KSRTC) ಮತ್ತು  ಖಾಸಗಿ ಬಸ್ ( Privet Bus ) ನಡುವೆ ಅಪಘಾತ ( Accident ) ಸಂಭವಿಸಿ  50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ( Injured ) ಘಟನೆ ಶಿವಮೊಗ್ಗ ( Shivamogga ) ತಾಲೂಕಿನ ತೋಟದಕೆರೆ ಬಳಿ ನಡೆದಿದೆ.

ಗಾಯಾಳುಗಳನ್ನು ಮೆಗ್ಗಾನ್ (Meggan Hospital) ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಖಾಸಗಿ ಬಸ್ ಚಾಲಕ ಶ್ರೀಧರ್‌ ಸ್ಥಿತಿ ಗಂಭೀರವಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ. ಖಾಸಗಿ ಬಸ್ ಕೆಕೆಬಿ ಶಿವಮೊಗ್ಗದಿಂದ ಶೃಂಗೇರಿ ಹೊರಟಿತ್ತು. ಸರಕಾರಿ ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಬರುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ನಲ್ಲಿ 35ಕ್ಕೂ ಹೆ್ಚ್ಚು ಮತ್ತು ಕೆಎಸ್ ಆರ್ ಟಿಸಿ ಬಸ್ ನಲ್ಲಿ 45ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

 


Spread the love

About Laxminews 24x7

Check Also

ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

Spread the love ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ