Breaking News

ಬೆಳಗಾವಿ: ಮಲಗಿರುವ ರೀತಿಯಲ್ಲಿ ವ್ಯಕ್ತಿಯ ಅಸ್ತಿಪಂಜರ ಪತ್ತೆ!

Spread the love

ಬೆಳಗಾವಿ: ಮನೆಯಲ್ಲಿ ಮಲಗಿಕೊಂಡಿರುವ ರೀತಿಯಲ್ಲಿ ಸಾವನ್ನಪ್ಪಿದ ಮನುಷ್ಯನ ಅಸ್ತಿಪಂಜರ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಶಿವಾಪೂರ ಗ್ರಾಮದ ಮನೆಯೊಂದರಲ್ಲಿ ನಡೆದಿದೆ. ಮೃತರನ್ನು ಶಿವಾಪೂರ ಗ್ರಾಮದ ಪ್ರಕಾಶ ತವನಪ್ಪ ಮುರಗುಂಡಿ ಮತ್ತು ಅಂದಾಜು 8 ರಿಂದ 9 ತಿಂಗಳ ಹಿಂದೆ ಸಾವಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಬುದ್ಧಿಮಾಂದ್ಯನಾಗಿದ್ದ ಆತ ಮನೆಯಲ್ಲಿ ತಾನೊಬ್ಬನೇ ವಾಸ ಮಾಡುತ್ತಿದ್ದ. ಹಳೇ ಕಟ್ಟಡದಲ್ಲಿ ಏಕಾಂಗಿ ಜೀವನ ನಡೆಸುತ್ತಿದ್ದ ಆತ ಪದವೀಧರನಾಗಿದ್ದ. ಮನೆಯ ಒಳಗೆ ಕೀಲಿ ಹಾಕಿಕೊಂಡು ಇರುತ್ತಿದ್ದ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಸದ್ಯ ಸ್ಥಳಕ್ಕೆ ಮುರಗೋಡ ಪೊಲೀಸ್ ಠಾಣೆಯ ಸಿಪಿಐ ಮೌನೇಶ್ವರ ಮಾಲಿ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾಗಿದೆಯೋ? ಕಾಯಿಲೆಯಿಂದ ಸಾವನ್ನಪ್ಪಿದ್ದಾರೋ? ಅಥವಾ ಹಸಿವಿನಿಂದ ಮೃತಪಟ್ಟಿದ್ದಾರೋ ಎಂಬುವುದನ್ನು ಪೊಲೀಸರು ತನಿಖೆಯಿಂದ ಪತ್ತೆ ಹಚ್ಚಬೇಕಿದೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಾಗಲಕೋಟೆ: ಹಳ್ಳಕ್ಕೆ ಬಿದ್ದ ಬಾಲಕ, ಕಾಪಾಡಲು ಹೋದ ಯುವಕ ನೀರುಪಾಲು

Spread the loveಬಾಗಲಕೋಟೆ: ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್​ ತಾಲೂಕಿನ ಚಿಕನಾಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ