Breaking News

ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್;ಮರಣೋತ್ತರ ಪರೀಕ್ಷಾ ವರದಿ ಬಹಿರಂಗ

Spread the love

ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ, ವಾಸ್ತು ತಜ್ಞ ಡಾ.ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ವರದಿ ಬಹಿರಂಗವಾಗಿದೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಡಾ.ಸುನೀಲ್ ಬಿರಾದಾರ್ ನೇತೃತ್ವದಲ್ಲಿ ಚಂದ್ರಶೇಖರ್ ಗುರೂಜಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿಯಲ್ಲಿ ಗುರೂಜಿಯವರಿಗೆ ಬರೋಬ್ಬರಿ 42 ಬಾರಿ ಚಾಕುವಿನಿಂದ ಇರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಚಂದ್ರಶೇಖರ್ ಗುರೂಜಿ ಕುತ್ತಿಗೆಯ ಭಾಗದಲ್ಲಿ ಎರಡು ಕಡೆ ಇರಿದ ಗುರುತು ಪತ್ತೆಯಾಗಿದ್ದು, 2-3 ಇಂಚಿನಷ್ಟು ಆಳವಾಗಿ ಇರಿದ ಗಾಯವಾಗಿದೆ. ಕುತ್ತಿಗೆ ಭಾಗದಲ್ಲಿ ಇರಿದ ಪರಿಣಾಮ ಹೆಚ್ಚು ರಕ್ತಸ್ರಾವವಾಗಿದೆ. ದೇಹದ ಒಟ್ಟು 42 ಕಡೆ ಚಾಕುವಿನಿಂದ ಇರಿದ ಗುರುತು ಪತ್ತೆಯಾಗಿದೆ ಎಂದು ಪೋಸ್ಟ್ ಮಾರ್ಟಮ್ ರಿಪೋರ್ಟ್ ನಲ್ಲಿ ತಿಳಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಇನ್ನು ಕಿಮ್ಸ್ ಆಸ್ಪತ್ರೆಯಿಂದ ಚಂದ್ರಶೇಖರ್ ಗುರೂಜಿ ಪಾರ್ಥಿವ ಶರೀರವನ್ನು ಹುಬ್ಬಳ್ಳಿಯ ಕೇಶ್ವಾಪುರ ಬಳಿಯ ಸುಳ್ಳ ಗ್ರಾಮಕ್ಕೆ ಕೊಂಡಯ್ಯಲಾಗುತ್ತಿದ್ದು, ಸಂಜೆ ಸುಳ್ಳ ಗ್ರಾಮದಲ್ಲಿನ ಗುರೂಜಿ ಜಮೀನಿನಲ್ಲಿ ವೀರಶೈವ-ಲಿಂಗಾಯಿತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ