Breaking News

ಔಟ್​..! ಹುಬ್ಬಳ್ಳಿ ಪೊಲೀಸರ ಮುಂದೆ ಸ್ಫೋಟಕ ಹೇಳಿಕೆ ನೀಡಿದ ಹಂತಕರು..!

Spread the love

ಹುಬ್ಬಳ್ಳಿ : ಚಂದ್ರಶೇಖರ್​​​ ಗುರೂಜಿ ಬೇನಾಮಿ ಆಸ್ತಿಗಳ ಸೀಕ್ರೆಟ್ ಔಟ್​ ಆಗಿದ್ದು, ಹುಬ್ಬಳ್ಳಿ ಪೊಲೀಸರ ಮುಂದೆ ಹಂತಕರು ಸ್ಫೋಟಕ ಹೇಳಿಕೆ ನೀಡಿದ್ಧಾರೆ.

 ಚಂದ್ರಶೇಖರ್​​​ ಗುರೂಜಿ ಮುಂಬೈ, ಹುಬ್ಬಳ್ಳಿ, ಬೆಂಗಳೂರು ಸೇರಿ ಹಲವೆಡೆ ಆಸ್ತಿ ಮಾಡಿದ್ದಾರೆ.

ಗುರೂಜಿ ಎಲ್ಲೆಲ್ಲಿ ಆಸ್ತಿ ಮಾಡಿದ್ರು ಅಂತಾ ಶಿಷ್ಯ ಬಾಯಿಬಿಟ್ಟಿದ್ದಾನೆ. ಮಾಜಿ ನೌಕರ ಮಹಾಂತೇಶ್​ ಶಿರೂರಗೆ ಪೊಲೀಸ್ ಡ್ರಿಲ್​​​ ಮಾಡಿದ್ದು, ಕಳೆದ ರಾತ್ರಿ ಕಮಿಷನರ್ ಲಾಬೂರಾಮ್​​​ ವಿಚಾರಣೆ ನಡೆಸಿದ್ಧಾರೆ. 5 ಕೋಟಿ ಆಸ್ತಿ ವಿಚಾರಕ್ಕೆ ಕೊಲೆ ಮಾಡಿದ್ದಾಗಿ ಒಪ್ಪಿಗೆ ನೀಡಿದ್ಧಾರೆ. ಮಹಾಂತೇಶ್​ 5 ಕೋಟಿ ಮೌಲ್ಯದ ಆಸ್ತಿ ಮಾರಿದ್ಧಾರೆ. ಗುರೂಜಿಗೆ ಸೇರಿದ್ದ 5 ಕೋಟಿ ಮೌಲ್ಯದ ಆಸ್ತಿ ಮಾರಾಟವಾಗಿದೆ.

ಮಹಾಂತೇಶನ ಹೆಸರಲ್ಲಿ ಗೋಕುಲ ರಸ್ತೆ ಬಳಿ ಬೇನಾಮಿ ಆಸ್ತಿಯಿದೆ. ಮಾರಾಟ ಮಾಡಿದ್ದ ಹಣ ನೀಡುವಂತೆ ಗುರೂಜಿ ಒತ್ತಡ ಹಾಕಿದ್ದರೆ. ಇಬ್ಬರ ನಡುವೆ ಅನೇಕ ಸಲ ಇದೇ ಕಾರಣಕ್ಕೆ ಜಗಳ ನಡೆದಿತ್ತು. ಗುರೂಜಿ 2016ರಲ್ಲಿ ಮಹಾಂತೇಶ್​ನನ್ನು ಕೆಲಸದಿಂದ ತಗೆದಿದ್ದರು, ಮಹಾಂತೇಶ 2008ರಿಂದ ಮುಂಬೈನಲ್ಲಿ ಸರಳವಾಸ್ತು ಸಂಸ್ಥೆ ಮುಖ್ಯಸ್ಥ ಆಗಿದ್ದನು. ಮಹಾಂತೇಶ್ ದಂಪತಿ ಹೆಸರಲ್ಲಿ ಹುಬ್ಬಳ್ಳಿಯ ಕೆಲವೆಡೆ ಗುರೂಜಿ ಆಸ್ತಿ ಮಾಡಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ