Breaking News

ನಿರಂತರ ಮಳೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ

Spread the love

ಬೆಂಗಳೂರು: ನೆರೆಯ ಮಹಾರಾಷ್ಟ್ರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿರುವದರಿಂದ ಕೃಷ್ಣಾ ನದಿಯ ಒಳಹರಿವು ಹೆಚ್ಚಿದೆ. ಆಲಮಟ್ಟಿ ಜಲಾಶಯದ ಒಳಹರಿವು ಇಂದು 75,149 ಕ್ಯೂಸೆಕ್ಸ್ ಇದೆ. ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗುವ ಸಂಭವವಿದೆ ಎಂದು ವರದಿಗಳು ತಿಳಿಸಿವೆ.

 

ಇನ್ನು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಭಾಗದಲ್ಲಿ ವ್ಯಾಪಕ ಮಳೆ ಹಿನ್ನೆಲೆ ತುಂಗಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದೆ. ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇದಲ್ಲದೆ ಭದ್ರಾ, ಲಿಂಗನಮಕ್ಕಿ ಸೇರಿದಂತೆ ಇನ್ನುಳಿದ ಜಲಾಯಶಗಳು ಸಹ ಮಳೆಯಿಂದಾಗಿ ಭರ್ತಿಯಾಗಿವೆ. ಇಂದಿನ ಮಾಹಿತಿಯ ಪ್ರಕಾರ ಯಾವ್ಯಾವ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಅಥವಾ ಸಾಮರ್ಥ್ಯ ಎಷ್ಟಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ