Breaking News

BPL’ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಶೀಘ್ರವೇ ರಾಗಿ, ಜೋಳ ವಿತರಣೆ ಸ್ಥಗಿತ!

Spread the love

ಬೆಂಗಳೂರು : ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಲು ಮುಂದಾಗಿದ್ದು, ಬಿಪಿಎಲ್ ಪಡಿತರದಾರರಿಗೆ ಅಕ್ಕಿಯ ಜೊತೆಗೆ ನೀಡುತ್ತಿದ್ದ ಜೋಳ, ರಾಗಿ ವಿತರಣೆ ಆಗಸ್ಟ್ ನಂತರ ಸ್ಥಗಿತಗೊಳ್ಳಲಿದೆ.

 

ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ ರಾಗಿ, ಜೋಳ ವಿತರಣೆ ಮಾಡುತ್ತಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ 5 ಲಕ್ಷ ಮೆಟ್ರಿಕ್ ಟನ್ ರಾಗಿ, 1 ಲಕ್ಷ ಮೆಟ್ರಿಕ್ ಟನ್ ಜೋಳ, 2.60 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿ ಮಾಡಿತ್ತು, ಕೇಂದ್ರದ ಸೂಚನೆಯಂತೆ ಕಳೆದ ಮೂರು ತಿಂಗಳಿನಿಂದ ವಿತರಣೆ ಮಾಡಲಾಗುತ್ತಿತ್ತು. ಈಗ ಸಂಗ್ರಹಣೆ ಮಾಡಿದ್ದ ರಾಗಿ, ಜೋಳ ಖಾಲಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಡಿತರ ಚೀಟಿದಾರರಿಗೆ ರಾಗಿ, ಜೋಳ ವಿತರಣೆ ಸ್ಥಗಿತಗೊಳಿಸಲಾಗುತ್ತಿದೆ.

 

ಉತ್ತರ ಕರ್ನಾಟಕದಲ್ಲಿ ಬಿಪಿಎಲ್ ಪಡಿತರದಾರರಿಗೆ ಅಕ್ಕಿಯ ಜೊತೆಗೆ ಜೋಳ ಆಗಸ್ಟ್ ನಂತರ ಸ್ಥಗಿತಗೊಂಡರೆ, ದಕ್ಷಿಣ ಕರ್ನಾಟಕ ಭಾಗದಲ್ಲಿ ಸೆಪ್ಟೆಂಬರ್ ನಂತರ ರಾಗಿ ಸ್ಥಗಿತಗೊಳ್ಳಲಿದೆ. ಈ ಹಿಂದೆ ನೀಡುತ್ತಿದ್ದಂತೆ 10 ಅಕ್ಕಿ ವಿತರಣೆ ಮುಂದುವರೆಯಲಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಯಾದವಾಡದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

Spread the love *ಅಕ್ರಮ ಸಾರಾಯಿ ಚಟುವಟಿಕೆಯ ಬಗ್ಗೆ ನೀಗಾ ವಹಿಸಿ, ಕಠಿಣ ಕ್ರಮಕ್ಕೆ ಮುಂದಾಗಿ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ