Breaking News

ಗೋಕಾಕ ತಾಲೂಕಿನ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ

Spread the love

ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಮೂಡಲಗಿ ತಾಲೂಕಿನ ನಾಲ್ಕು ಸೇತುವೆಗಳು ಜಲಾವೃತವಾಗಿದೆ. ಕೆಲ ಬೈಕ್ ಸವಾರರು ಅಪಾಯ ಲೆಕ್ಕಿಸದೇ ಜಲಾವೃತವಾದ ಸೇತುವೆ ಮೇಲೆಯೇ ಸಂಚರಿಸಿದ್ದಾರೆ.

ಪ್ರಮುಖವಾಗಿ ಅವರಾದಿ – ಮಹಾಲಿಂಗಾಪುರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ, ಸುಣಧೋಳ -ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸೇತುವೆ, ವಡೇರಹಟ್ಟಿ-ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಹಾಗೂ ಮೂಡಲಗಿ-ಭೈರನಹಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿವೆ. ಪರಿಣಾಮ ಈ ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಚಾರ ಸ್ಥಗಿತವಾಗಿದೆ.

ಸದ್ಯ ಬಳ್ಳಾರಿ ನಾಲಾ, ಮಾರ್ಕಂಡೇಯ, ಹಿರಣ್ಯಕೇಶಿ ನದಿಗಳಿಂದ ಘಟಪ್ರಭಾ ನದಿಗೆ 14,227 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಿದೆ. ಹೀಗಾಗಿ ಮೂಡಲಗಿ – ಗೋಕಾಕ ತಾಲೂಕಿನ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಘಟಪಭ್ರಾ ನದಿಯಿಂದ ಮುಳುಗಡೆಯಾಗಿರುವ ಸುಣಧೋಳಿ-ಮೂಡಲಗಿ ಸೇತುವೆ ಮೇಲೆ ಬೈಕ್ ಸವಾರರು ಸಂಚಾರ ನಡೆಸಿದ್ದಾರೆ. ಸ್ವಲ್ಪ ಆಯ ತಪ್ಪಿಬಿದ್ದರೂ ನದಿ ಪಾಲಾಗುವ ಆತಂಕ ಎದುರಾಗಿದೆ‌. ಜಿಲ್ಲಾಡಳಿತ ಈಗಲೇ ಕ್ರಮ ಕೈಗೊಳ್ಳದಿದ್ದರೆ ಅಪಾಯ ಕಟ್ಟಿಟ್ಟಬುತ್ತಿ ಎನ್ನುತ್ತಾರೆ ಗ್ರಾಮಸ್ಥರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ