Breaking News

ಕಸದ ಬಂಡಿಯಲ್ಲಿ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್, ಅಬ್ದುಲ್ ಕಲಾಂ ಫೋಟೋ.

Spread the love

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಥುರಾದಲ್ಲಿ ವ್ಯಕ್ತಿಯೊಬ್ಬ ತಳ್ಳಿಕೊಂಡು ಹೋಗುತ್ತಿರುವ ಕಸದ ಬಂಡಿಯಲ್ಲಿ ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್, ಎಪಿಜೆ ಅಬ್ದುಲ್ ಕಲಾಂ ಅವರ ಫೋಟೋಗಳು ಕಂಡುಬಂದಿವೆ. ಈ ದೃಶ್ಯವನ್ನು ಅಲ್ಲಿನ ಜನರು ವಿಡಿಯೋ ಮಾಡಿದ್ದು, ವ್ಯಕ್ತಿಯ ಮೇಲೆ ಆಕ್ರೋಶಗೊಂಡಿರುವ ಘಟನೆ ನಡೆದಿದೆ.

ಮೂಲಗಳ ಪ್ರಕಾರ, ಎಸೆದ ವಸ್ತುಗಳ ಕಸದ ರಾಶಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಎಪಿಜೆ ಅಬ್ದುಲ್ ಕಲಾಂ ಅವರ ಫೋಟೋಗಳು ಕಂಡುಬಂದಿವೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಮುನ್ಸಿಪಲ್ ಕಾರ್ಪೊರೇಷನ್ ಉದ್ಯೋಗಿ ಕೆಲಸ ಕಳೆದುಕೊಂಡಿದ್ದಾರೆ.

ವಿಡಿಯೋದಲ್ಲಿ, ವ್ಯಕ್ತಿ ಕಸದ ಬಂಡಿ ತಳ್ಳಿಕೊಂಡು ಹೋಗುತ್ತಿದ್ದು, ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಎಪಿಜೆ ಅಬ್ದುಲ್ ಕಲಾಂ ಅವರ ಫೋಟೋಗಳು ಕಂಡುರುತ್ತವೆ. ಇದನ್ನು ಕಂಡ ಅಲ್ಲಿನ ಸ್ಥಳೀಯರು ಅವನನ್ನೇ ಹಿಂಬಾಲಿಸಿ ʻಹೀಗೆ ಮಾಡುತ್ತಿರುವುದು ಸರಿನಾ?ʼ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ವ್ಯಕ್ತಿ ‘ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಅದು ಕಸದ ಬುಟ್ಟಿಯಲ್ಲಿತ್ತು, ಆದ್ದರಿಂದ ನಾನು ಅವುಗಳನ್ನು ನನ್ನ ಗಾಡಿಯಲ್ಲಿ ಹಾಕಿದ್ದೇನೆ’ ಎನ್ನುವುದನ್ನು ಇಲ್ಲಿ ಕೇಳಬಹುದು.


Spread the love

About Laxminews 24x7

Check Also

ಡ್ರಗ್ಸ್ ದಂಧೆಕೋರರೊಂದಿಗೆ ಪೊಲೀಸರು ಶಾಮೀಲಾಗಿದ್ದು ಕಂಡುಬಂದ್ರೆ ಎಫ್ಐಆರ್ ದಾಖಲಿಸಿ ಸೇವೆಯಿಂದ ವಜಾ: ಜಿ. ಪರಮೇಶ್ವರ್

Spread the loveಬೆಳಗಾವಿ: ಡ್ರಗ್ಸ್ ಪಿಡುಗಿನ ವಿರುದ್ಧ ಸಮರ ಸಾರಿದ್ದು, ಪೊಲೀಸ್ ಇಲಾಖೆಯಲ್ಲಿದ್ದುಕೊಂಡು ಮಾದಕವಸ್ತು ಮಾರಾಟಕ್ಕೆ ಉತ್ತೇಜನ ನೀಡುವ ಸಿಬ್ಬಂದಿಗಳ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ