Breaking News

ರಾಜ್ಯ ರೈತರಿಗೆ ಮತ್ತೊಂದು ಗುಡ್ ನ್ಯೂಸ್.

Spread the love

ಬೆಂಗಳೂರು: ಪ್ರಾಣಿಗಳ ರಕ್ಷಣೆಗಾಗಿ ಜುಲೈ 19ರಂದು ಬೆಳಗಾವಿ ಜಿಲ್ಲೆಗೆ 82 ‘ಪಶು ಸಂಜೀವಿನಿ’ ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಗವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಭಾನುವಾರ ಹೇಳಿದ್ದಾರೆ.

 

ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪಶುಸಂಗೋಪನಾ ಇಲಾಖೆಯು ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಅನುದಾನದಲ್ಲಿ 15 ಪಶು ಸಂಜೀವಿನಿ ಆಂಬ್ಯುಲೆನ್ಸ್ಗಳನ್ನು ಪ್ರಾರಂಭಿಸಿತು.

ಇತರ ಪ್ರಾಣಿಗಳು ಸೇರಿದಂತೆ ಹಸುಗಳು, ಎತ್ತು, ಎಮ್ಮೆಗಳಂತಹ ಪ್ರಾಣಿಗಳಿಗೆ ಸೂಕ್ತ ಆರೋಗ್ಯ ಸೇವೆಗಳನ್ನು ಒದಗಿಸಲು ಈ ಉಪಕ್ರಮವನ್ನು ವಿಸ್ತರಿಸಲು ನಾವು ತುಂಬಾ ಆಸಕ್ತಿ ಹೊಂದಿದ್ದೇವೆ’ ಎಂದು ಚೌಹಾಣ್ ಹೇಳಿದ್ದಾರೆ.

 

275 ಪಶು ಸಂಜೀವಿನಿ ಆಂಬ್ಯುಲೆನ್ಸ್ಗಳ ಪೈಕಿ 70 ಆಂಬ್ಯುಲೆನ್ಸ್ಗಳನ್ನು ಈಗಾಗಲೇ ಬೆಂಗಳೂರು ವಿಭಾಗದಲ್ಲಿ ರೈತರು ಮತ್ತು ಜಾನುವಾರುಗಳ ಅನುಕೂಲಕ್ಕಾಗಿ ಪ್ರಾರಂಭಿಸಲಾಗಿದೆ. ಜುಲೈ 19 ರಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಹಿರಿಯ ಸಚಿವರು, ಸಂಸದರು ಮತ್ತು ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 82 ಪಶು ಸಂಜೀವಿನಿ (ಸಂಚಾರಿ ಪಶುವೈದ್ಯಕೀಯ ವಾಹನಗಳು) ಆಂಬ್ಯುಲೆನ್ಸ್ ಗಳನ್ನು ಉದ್ಘಾಟಿಸಲಾಗುವುದು ಎಂದು ಸಚಿವರು ಹೇಳಿದರು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ