Breaking News

ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾದ ಪತಿ ಪರಲೋಕಕ್ಕೆ ಕಳುಹಿಸಿದ ಪತ್ನಿ!

Spread the love

ಕಲಬುರಗಿ: ಎರಡು ತಿಂಗಳ ಹಿಂದೆ ನಡೆದ ವ್ಯಕ್ತಿಯೊಬ್ಬರ ಕೊಲೆ ಕೇಸನ್ನು ಪೊಲೀಸರು ಭೇದಿಸಿದ್ದಾರೆ.

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದನೆಂದು ಪತ್ನಿಯೇ ಪತಿಯನ್ನು ಕೊಲೆ ಮಾಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪತ್ನಿ ಮಹಾದೇವಿ, ಸಂತೋಷ್ ಬಿರಾದಾರ್, ಸತೀಶ್​ರನ್ನು ಬಂಧಿಸಲಾಗಿದೆ.

ಘಟನೆ ಏನು?: ಮೇ 15 ರಂದು ಜಿಲ್ಲೆಯ ಅಫಜಲಪುರ ತಾಲೂಕಿನ ಕೇಶ್ವಾಪುರ ಗ್ರಾಮದ ಬಳಿ ಜಮೀನುವೊಂದರಲ್ಲಿ ಗುರುಪ್ಪ ಎಂಬಾತನ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ, ಪತ್ನಿಯ ವಿರುದ್ಧವೇ ಕುಟುಂಬಸ್ಥರು ಶಂಕಿಸಿದ್ದರು. ಆದರೆ, ಈ ಬಗ್ಗೆ ಯಾವುದೇ ಸುಳಿವು ಇರಲಿಲ್ಲ.

ಕೊಲೆಯಾದ ಗುರುಪ್ಪನ ಸ್ನೇಹಿತ ಸಂತೋಷ್ ಎಂಬಾತನ ಆರೋಪಿ ಮಹಾದೇವಿ ಅಕ್ರಮ ಸಂಬಂಧ ಹೊಂದಿದ್ದಳು. ಇದನ್ನು ಪ್ರಶ್ನಿಸುತ್ತಿದ್ದ ಪತಿಯೊಂದಿಗೆ ಮಹಾದೇವಿ ಜಗಳವಾಡುತ್ತಿದ್ದಳು. ಇದರಿಂದ ಬೇಸತ್ತ ಮಹಾದೇವಿ ಗುರುಪ್ಪನನ್ನು ಮುಗಿಸಲು ಪ್ರಿಯಕರ ಸಂತೋಷರರ ಜೊತೆಗೂಡಿ ಸ್ಕೆಚ್​ ಹಾಕಿದ್ದಳು.

ಅದರಂತೆ ಮೇ 15 ರಂದು ಗುರುಪ್ಪನನ್ನು ಜೇವರ್ಗಿಯಿಂದ ಫರಹತಾಬಾದ್ ಕಡೆಗೆ ಕರೆತಂದು ಮಾರಕಾಸ್ತ್ರಗಳಿಂದ ಕೊಲೆ ಮಾಡಿ, ನಂತರ ಶವವನ್ನು ಅಫಜಲಪುರ ತಾಲೂಕಿನ ಕೇಶ್ವಾಪುರ ಗ್ರಾಮದ ಜಮೀನೊಂದರಲ್ಲಿ ಬಿಸಾಡಲಾಗಿತ್ತು. ಮೇ 15 ರಂದು ಶವ ಪೊಲೀಸರು ಶವ ಪತ್ತೆ ಮಾಡಿದ್ದರು. ಆದರೆ, ಅದು ಗುರುಪ್ಪ ಎಂದು ಗುರುತು ಸಿಕ್ಕಿರಲಿಲ್ಲ. ಈ ಬಗ್ಗೆ ದೂರು ದಾಖಲಾಗದಿದ್ದಕ್ಕಾಗಿ ಪೊಲೀಸರೇ ಶವಸಂಸ್ಕಾರ ಮಾಡಿದ್ದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ