Breaking News

ಅಕ್ರಮ ಅಕ್ಕಿ ಸಾಗಾಟ ; ಅಧಿಕಾರಿಗಳ ತಪಾಸಣೆ; ಚಾಲಕನ ಬಂಧನ

Spread the love

ಕುಳಗೇರಿ ಕ್ರಾಸ್ : ಸರಕಾರದ ವಿವಿಧ ಯೋಜನೆಗಳಲ್ಲಿ ಉಚಿತವಾಗಿ ಫಲಾನುಭವಿಗಳಿಗೆ ವಿತರಣೆ ಮಾಡುತ್ತಿದ್ದ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಅಕ್ರಮ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದ, ವಾಹನವನ್ನು ಅಧಿಕಾರಿಗಳು ತಪಾಸಣೆ ಮಾಡಿದ್ದು, ಚಾಲಕನನ್ನು ಹಿಡಿದು ಬಂಧಿಸಿದ ಘಟನೆ ಬಾದಾಮಿ ತಾಲೂಕಿನ ರೇಲ್ವೆ ಸ್ಟೇಶನ್ ಗ್ರಾಮದ ಹತ್ತಿರ ನಡೆದಿದೆ.

 

ಬಾದಾಮಿಯಿಂದ ಬಾಗಲಕೋಟೆ ಕಡೆಗೆ ಹೊರಟಿದ್ದ ಅಶೋಕ ಲೇಲ್ಯಾಂಡ್ ವಾಹನದಲ್ಲಿ ಸರಕಾರದ ಅನುಮತಿ ಇಲ್ಲದೇ ರೂ.೨೩೧೦೦ ಮೌಲ್ಯದ ೧೦೫೦ ಕೆಜಿ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದರು. ಆಹಾರ ಇಲಾಖೆಯ ನಿರೀಕ್ಷಕ ಮಂಜುನಾಥ ರೊಟ್ಟಿ ಹಿಡಿದು ತಪಾಸಣೆ ಮಾಡಿದ್ದಾರೆ.

ವಾಹನದ ಚಾಲಕ ಸಿಕ್ಕಿಬಿದ್ದಿದ್ದಾನೆ. ತಪಾಸಣೆ ಸಂದರ್ಭದಲ್ಲಿ ಇನ್ನೋರ್ವ ಆಹಾರ ನಿರೀಕ್ಷಕ ಶಬ್ಬೀರ ಅಹ್ಮದ್ ಕೋತವಾಲ ಹಾಜರಿದ್ದರು. ವಾಹನ ಚಾಲಕ ಮೂಲತಃ ವಿಜಯಪೂರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಬೈರವಾಡಗಿ ಗ್ರಾಮದ(ಹಾಲಿ ವಸ್ತಿ ; ಸಿಕ್ಕೇರಿ ಕ್ರಾಸ್) ಲಾಡ್ಲೆಮಶಾಕ ಬುಡೇಸಾಹೇಬ ಯರನಾಳ ಎಂಬಾತನನ್ನು ಬಂಧಿಸಲಾಗಿದೆ. ಈ ಕುರಿತು ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ