Breaking News

ಬೆಳಗಾವಿ: ಹೆರಿಗೆ ವೇಳೆ ಮಗು ಸಾವು; ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಂಧಿಗಳ ಪ್ರತಿಭಟನೆ

Spread the love

ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಮೃತಪಟ್ಟಿರುವುದಾಗಿ ಆರೋಪಿಸಿ ಕುಟುಂಬದವರು ಬಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

 

ಹೊನ್ನಿಹಾಳ ಗ್ರಾಮದ ಸುನೀತಾ ಎಂಬ ಗರ್ಭಿಣಿಯನ್ನು ವಾರದ ಹಿಂದೆ ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಲ್ಲಿನ ವೈದ್ಯರು ಅವಳತ್ತ ಲಕ್ಷ್ಯವನ್ನೇ ನೀಡಿಲ್ಲ. ಸಿಜೇರಿಯನ್ ಮಾಡಿ ಎಂದು ಅಂಗಲಾಚಿದರೂ ವೈದ್ಯರು ಕೇಳಿಲ್ಲ ಎಂಬುದು ಕುಟುಂಬದವರ ಆರೋಪ.

 

 

 

“ಸ್ಕ್ಯಾನಿಂಗ್ ಕೂಡ ಹೊರಗಿನಿಂದ ಮಾಡಿಸಿಕೊಂಡು ಬರಲು ಹೇಳಿದರು. ನಾರ್ಮಲ್ ಹೆರಿಗೆಯಾಗುವ ವಿಶ್ವಾಸದಲ್ಲಿ ನಾವಿದ್ದೆವು. ಆದರೆ ವೈದ್ಯರ ನಿರ್ಲಕ್ಷ್ಯದಿಂದ ದುರಂತವೇ ಆಗಿದೆ. ಸರಕಾರ ನೀಡುವ ಸೌಲಭ್ಯ ಇದೇನಾ?” ಎಂದು ಮಹಿಳೆಯ ಸಂಬಂಧಿಗಳು ಆಕ್ರೋಶದಿಂದ ಕೂಗಾಡಿದರು.

 

ಸ್ಥಳಕ್ಕೆ ಆಗಮಿಸಿದ ಪೊಲೀಸರು ಪಾಲಕರನ್ನು ಸಮಾಧಾನಪಡಿಸಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ