Breaking News

ಬರ್ಬರವಾಗಿ ಹತ್ಯೆಗೈದು ಯುವತಿಯ ರುಂಡದೊಂದಿಗೆ ಠಾಣೆಗೆ ಆಗಮಿಸಿದ ಪಾಗಲ್ ಪ್ರೇಮಿ

Spread the love

ವಿಜಯನಗರ (ಹೊಸಪೇಟೆ): ಪಾಗಲ್‌ ಪ್ರೇಮಿಯೋರ್ವ ಯುವತಿಯ ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಯುವತಿಯ ತಲೆಯೊಂದಿಗೆ ಠಾಣೆಗೆ ಆಗಮಿಸಿ ಪೊಲೀಸರಿಗೆ ಶರಣಾದ ಘಟನೆ ಕಾನಾಹೊಸಹಳ್ಳಿ ಕನ್ನಬೋರಯ್ಯನಹಟ್ಟಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ನಿರ್ಮಲಾ (23) ಕೊಲೆಯಾದ ಯುವತಿ, ಭೋಜರಾಜ ಎಂಬಾತ ಕೊಲೆ ಮಾಡಿದ ವ್ಯಕ್ತಿ.

ನಿರ್ಮಲಾ ಹಾಗೂ ಭೋಜರಾಜ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಕಳೆದ ಮೂರು ತಿಂಗಳ ಹಿಂದೆ ಬೇರೆ ಯುವತಿಯೊಂದಿಗೆ ಬೋಜರಾಜ ಮದುವೆಯಾಗಿದ್ದ ಎಂದು ತಿಳಿದುಬಂದಿದೆ.

ಯುವತಿ ಬಿಎಸ್ಸಿ ನರ್ಸಿಂಗ್ ಕೊನೆಯ ವರ್ಷದ ಓದುತ್ತಿದ್ದು, ವಿಶ್ರಾಂತಿಗೆಂದು ಸ್ವ ಗ್ರಾಮಕ್ಕೆ ಕಳೆದ ಮೂರು ದಿನಗಳ ಹಿಂದೆಯಷ್ಟೇ ಆಗಮಿಸಿದ್ದಳು. ಭೋಜರಾಜ ಏಕ ಏಕಿ ಯುವತಿಯ ಮನೆಗೆ ನುಗ್ಗಿ ಮಚ್ಚಿನಿಂದ ತಲೆ ಕಡಿದು ಭೀಕರವಾಗಿ ಕೊಲೆ ಮಾಡಿದ್ದಾನೆ.

ಯುವತಿಯ ರುಂಡ ಹಿಡಿದು ಠಾಣೆಗೆ ಶರಣಾದ

ಯುವತಿಯ ತಲೆಯನ್ನು ಮಚ್ಚಿನಿಂದ ಕಡಿದು ಬೈಕ್ ನಲ್ಲಿ ಕಾನಾಹೊಸಹಳ್ಳಿ ಠಾಣೆಗೆ ರುಂಡ ತಂದು ಪೊಲೀಸರಿಗೆ ಶರಣಾಗಿದ್ದು, ಪ್ರಸ್ತುತ ಈ ಕೊಲೆಯಿಂದಾಗಿ ಗ್ರಾಮದ ಜನ ಆತಂಕದಲ್ಲಿದ್ದಾರೆ.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ