Breaking News

ಯಡಿಯೂರಪ್ಪರನ್ನು ಬಳಸಿಕೊಂಡ ನಂತರ ಬಿಜೆಪಿ ಈಗ ಅವರನ್ನು ಹೊರಹಾಕಿದೆ: ಸಂತೋಷ್ ಲಾಡ್

Spread the love

ಬಳ್ಳಾರಿ, ವಿಜಯನಗರ: ಇಲ್ಲಿಯವರೆಗೆ ಬಿ.ಎಸ್ ಯಡಿಯೂರಪ್ಪ ಅವರನ್ನು ಬಳಸಿಕೊಂಡ ಬಿಜೆಪಿ ಈಗ ಅವರನ್ನು ಹೊರ ಹಾಕಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹೊಸಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಪರ ಮಾತನಾಡುತ್ತಲೇ ಬಿಜೆಪಿಯನ್ನು ತೆಗಳಿದ್ದಾರೆ.

ಯಡಿಯೂರಪ್ಪ ಅವರಿಗೆ ವಯಸ್ಸಾಯ್ತು ಎಂಬುದು ಸರಿಯಲ್ಲ. ಅವರ ಕೆಲಸ ಗಮಮಿಸಬೇಕು. ಬಿಎಸ್​ವೈ ಅವರನ್ನು ಸೈಡ್ ಲೈನ್ ಮಾಡುತ್ತಿರೋದನ್ನು ಇಡೀ ಕರ್ನಾಟಕದ ಜನರು ನೋಡುತ್ತಿದ್ದಾರೆ. ರಾಜಕಾರಣದಲ್ಲಿ ವಯಸ್ಸು ಮುಖ್ಯ ಅಲ್ಲ. ಅವರು ಈಗಲೂ ಮತ ತರುವಂತಹ ಶಕ್ತಿ ಹೊಂದಿದ್ದಾರೆ. ಪುತ್ರ ವಿಜಯೇಂದ್ರ ಅವರಿಗೆ ತಮ್ಮ ಕ್ಷೇತ್ರ ಬಿಟ್ಟು ಕೊಟ್ಟಿದ್ದಾರೆ. ಆದರೆ ಅವರ ಪಕ್ಷವು ವಿಜಯೇಂದ್ರ ಅವರಿಗೆ ಟಿಕೆಟ್ ನೀಡುತ್ತದೆಯೋ ಇಲ್ಲವೋ ಗೊತ್ತಿಲ್ಲ. ವಿಜಯೇಂದ್ರ ನನಗೆ ಒಳ್ಳೆಯ ಸ್ನೇಹಿತ, ಅವರಿಗೆ ಒಳ್ಳೆಯದಾಗಲಿ ಎಂದು ಸಂತೋಷ್​ ಲಾಡ್​ ಹೇಳಿದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ