Breaking News

ನಿಮ್ಮ ಅಪ್ಪನ ಆಣೆ ನೀವಿಬ್ಬರೂ ಸಿಎಂ ಆಗುವ ಪ್ರಶ್ನೆಯೇ ಇಲ್ಲ: B.S.Y.

Spread the love

ಶಿಕಾರಿಪುರ :ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಯಾಗುತ್ತೇವೆ ಎಂದು ಓಡಾಡುತ್ತಿದ್ದಾರೆ.

ಅವರಿಗೆ ಕಿವಿಮಾತು ಹೇಳಲು ಇಚ್ಚಿಸುತ್ತೇನೆ. ನಿಮ್ಮ ಅಪ್ಪನ ಆಣೆ ನೀವು ಮುಖ್ಯಮಂತ್ರಿಯಾಗುವ ಪ್ರಶ್ನೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರೋಕ್ಷ ವಾಗ್ದಾಳಿ ನಡೆಸಿದರು.

ತಾಲ್ಲೂಕಿನ ಆಂಜನಾಪುರ ಗ್ರಾಮ ಸಮೀಪ ಶುಕ್ರವಾರ ನಡೆದ ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪಕ್ಷ ಸಂಘಟನೆಗೆ ರಾಜ್ಯದಲ್ಲಿ ಓಡಾಡುತ್ತೇನೆ. ರಾಜ್ಯದಲ್ಲಿ ನೂರಕ್ಕೆ ನೂರು ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬರುತ್ತದೆ. ಬಿಜೆಪಿಯವರೇ ಮುಖ್ಯಮಂತ್ರಿಯಾಗುತ್ತಾರೆ ಈ ಬಗ್ಗೆ ಅನುಮಾನ ಬೇಡ ಎಂದರು


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ