Breaking News

ಗಣೇಶೋತ್ಸವ ಆಚರಣೆ ಹಿನ್ನೆಲೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ

Spread the love

ಬೆಳಗಾವಿಯಲ್ಲಿ ಮುಂಬರುವ ಗಣೇಶೋತ್ಸವ ಆಚರಣೆ ಹಿನ್ನೆಲೆ ಜಿಲ್ಲೆಯಲ್ಲಿ ಮಾಡಿಕೊಳ್ಳಬೇಕಾದ ಸಿದ್ಧತೆಗಳನ್ನು ಕುರಿತಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಬೇಯನ್ನು ಹಮ್ಮಿಕೊಳ್ಳಲಾಗಿತ್ತು.

ಹೌದು ಇಂದು ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆ ಕುರಿತಂತೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಗಣೇಶೋತ್ಸವ ಆಚರಣೆ ಕುರಿತಂತೆ ಈಗ ಅನುಮತಿ ಇದೆ. ಆದರೆ ಮುಂಬರುವ ದಿನಗಳಲ್ಲಿ ಸರಕಾರ ಹಾಗೂ ನ್ಯಾಯಾಲಯಗಳು ಏನು ಆದೇಶಗಳನ್ನು ಹೊರಡಿಸುತ್ತವೆಯೋ ಅದನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ಗಣೇಶೋತ್ಸವಕ್ಕೆ ಇನ್ನೂ ಕಾಲಾವಕಾಶವಿದೆ.

ಇನ್ನು ನಾವು ಜನ ಪ್ರತಿನಿಧಿಗಳನ್ನು ಕರೆಸಿ ಸಭೆ ಮಾಡುತ್ತೇವೆ. ಇನ್ನು ಈ ವೇಳೆ ಡಿಜೆ ಬಳಕೆಗೆ ಅವಕಾಶವಿಲ್ಲ. ಹಾಗಾಗಿ ಈ ಕುರಿತಂತೆ ನ್ಯಾಯಾಲಯದ ಸ್ಪಸ್ಟ ಆದೇಶವಿದೆ.

ಇನ್ನು ಮುಂಬರುವ ದಿನಗಳಲ್ಲಿ ಸರಕಾರ ಈಗಿರುವ ನಿಯಮಗಳಲ್ಲಿ ಸಡಿಲಿಕೆ ನೀಡಿದರೆ ಅದನ್ನು ತಿಳಿಸಲಾಗುತ್ತದೆ ಎಂದರು.


Spread the love

About Laxminews 24x7

Check Also

ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ ಮಾಲಿನಿ ಸಿಟಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಸ್.ಎನ್.ದೇಸಾಯಿ ಹೇಳಿದರು.

Spread the loveಬೆಳಗಾವಿ :ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ