Breaking News

ಬೆಳಗಾವಿಯ ಯುವಕ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪಾದಯಾತ್ರೆ

Spread the love

ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವರು ಪಾದಯಾತ್ರೆ ಹೊರಟಿದ್ದಾರೆ. ಪಾದಯಾತ್ರೆಯ ಮೂರನೇ ದಿನವಾದ ಇಂದು ಬೆಳಗಾವಿಗೆ ಬಂದು ತಲುಪಿದ್ದಾರೆ. ಬೆಳಗಾವಿಯ ಸಿದ್ದರಾಮಯ್ಯ ಅಭಿಮಾನಿಗಳು ಅವರನ್ನು ನಗರದ ಕನಕದಾಸ ಸರ್ಕಲ್‍ನಲ್ಲಿ ಸ್ವಾಗತ ಮಾಡಿದರು.

ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದಲ್ಲಿ ಪಾಲ್ಗೊಳ್ಳಲು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೊಳೆ ಗ್ರಾಮದ ವ್ಯಕ್ತಿಯೋರ್ವ ಪಾದಯಾತ್ರೆಯನ್ನು ಕೈಗೊಂಡಿದ್ದಾನೆ. ಮೂರನೇ ದಿನವಾದ ಇಂದು ಆತ ಬೆಳಗಾವಿಗೆ ಬಂದು ತಲುಪಿದ್ದು ಸಿದ್ದರಾಮಯ್ಯನವರ ಅಭಿಮಾನಿಗಳು ಅವರನ್ನು ಸ್ವಾಗತ ಮಾಡಿದ್ದಾರೆ.

ಆಗಸ್ಟ್ 3ರಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟು ಹಬ್ಬದ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಇನ್ನು ನಾಡಿನಾದ್ಯಂತ ಸಾಕಷ್ಟು ಜನ ಈ ಕಾರ್ಯಕ್ರಮ್ಕ್ಕೆ ಆಗಮಿಸುವ ನಿರೀಕ್ಷೆಯಿದೆ. ಇನ್ನು ಈ ಕಾರ್ಯಕ್ರಮದಲ್ಲಿ ಸುಮಾರು 10 ಲಕ್ಷ ಜನ ಸೇರಬಹುದೆಂದು ಅಂದಾಜಿಸಲಾಗಿದೆ.

ಆದರೆ ಈ ಕಾರ್ಯಕ್ರಮಕ್ಕೆ ಈಗ ಬೆಳಗಾವಿಯಿಂದ ಸಿದ್ದರಾಮಯ್ಯನವರ ಅಭಿಮಾನಿಯೋರ್ವ ಪಾದಯಾತ್ರೆ ಮೂಲಕ ಹೊರಟಿದ್ದಾನೆ. ಇವರು ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಮೊಳೆ ಗ್ರಾಮದವರು ಹೆಸರು ಸಂತೋಷ್ ವಿಠೋಬಾ ಚೋರ್ಮಲೆ. ಪಕ್ಕಾ ಸಿದ್ದರಾಮಯ್ಯನವರ ಅಭಿಮಾನಿ


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ