Breaking News

ಗ್ರೀನ್ ಝೋನ್‍ನಲ್ಲಿ ಇದ್ದ ದಾವಣಗೆರೆಗೂ ಕೊರೊನಾ ಮಹಾಮಾರಿ ಎಂಟ್ರಿ,,,,,,,,,,

Spread the love

ದಾವಣಗೆರೆ: ಗ್ರೀನ್ ಝೋನ್‍ನಲ್ಲಿ ಇದ್ದ ದಾವಣಗೆರೆಗೂ ಕೊರೊನಾ ಮಹಾಮಾರಿ ಎಂಟ್ರಿಕೊಟ್ಟಿದೆ. ಜಿಲ್ಲೆಯ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ನಾವು ಗ್ರೀನ್ ಝೋನ್‍ನಲ್ಲಿ ಇದ್ದೇವೆ ಎಂದು ನೆಮ್ಮದಿಯಯಲ್ಲಿದ್ದ ದಾವಣಗೆರೆ ಜಿಲ್ಲೆಯ ಜನತೆ ಭಯದ ವಾತಾವರಣ ನಿರ್ಮಾಣವಾಗಿದೆ. ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ 38 ವರ್ಷದ ಮಹಿಳೆಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಮೊದಲ ಕೊರೊನಾ ಪ್ರಕರಣ ದಾಖಲಾಗಿದೆ.

ದಾವಣಗೆರೆ ನಗರದ ಭಾಷಾ ನಗರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ಟಾಫ್ ನರ್ಸ್ ಕಾರ್ಯನಿರ್ವಹಿಸುತ್ತಿದ್ದ ಮಹಿಳೆ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನಂತರ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಅವರ ಗಂಟಲ ದ್ರವ ಮತ್ತು ಬ್ಲಡ್ ಅನ್ನು ಸಂಗ್ರಹಿಸಿ ಶಿವಮೊಗ್ಗ ಲ್ಯಾಬ್ ರವಾನೆ ಮಾಡಲಾಗಿತ್ತು. ಆದರೆ ಇಂದು ಬಂದ ವರದಿಯಲ್ಲಿ ಮಹಿಳೆಗೆ ಸೋಂಕು ಇರುವುದು ಪತ್ತೆಯಾಗಿದೆ.

ಸೋಂಕಿತ ಮಹಿಳೆಗೆ ಪತಿ ಹಾಗೂ 18 ವರ್ಷದ ಪುತ್ರ ಇದ್ದು, ಜಿಲ್ಲಾಧಿಕಾರಿಗಳು ಆಕೆ ವಾಸವಿದ್ದ ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರ ಮಾಹಿತಿ ಸಂಗ್ರಹಿಸಿ, ಆ ಪ್ರದೇಶವನ್ನು ಸಂಪೂರ್ಣ ಸೀಲ್‍ಡೌನ್ ಮಾಡಿದ್ದಾರೆ. ಇದಕ್ಕೂ ಮೊದಲು ಆಸ್ಪತ್ರೆಯಲ್ಲಿ ಸೋಂಕಿತೆ ಸೇವೆ ಸಲ್ಲಿಸಿದ್ದು, ಆಸ್ಪತ್ರೆಗೆ ಬರುವ ರೋಗಿಗಳ ಸಂಪರ್ಕದಿಂದ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಆಕೆಯ ಜೊತೆ ಪ್ರಾಥಮಿಕ ಮತ್ತು ಎರಡನೇ ಹಂತದ ಸಂಪರ್ಕಕ್ಕೆ ಬಂದವರ ಬಗ್ಗೆ ಜಿಲ್ಲಾಡಳಿತ ಮಾಹಿತಿ ಸಂಗ್ರಹ ಮಾಡುತ್ತಿದೆ.


Spread the love

About Laxminews 24x7

Check Also

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Spread the loveದಾವಣಗೆರೆ/ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ