Breaking News
Home / ರಾಜಕೀಯ / ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಲೇಪಿತ ಮಾಳಿಗೆ ಸೋರಿಕೆ

ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಲೇಪಿತ ಮಾಳಿಗೆ ಸೋರಿಕೆ

Spread the love

ತಿರುವನಂತಪುರ: ಶಬರಿಮಲೆಯ ಅಯ್ಯಪ್ಪನ ದೇಗುಲದ ಗರ್ಭಗುಡಿಯ ಚಿನ್ನ ಲೇಪಿತ ಮಾಳಿಗೆಯಲ್ಲಿ ನೀರು ಸೋರಿಕೆಯಾಗುತ್ತಿರುವುದು ದೃಢಪಟ್ಟಿದೆ.

ಜು.16ರಂದು ಮಾಸಿಕ ಪೂಜೆಗೆಂದು ದೇಗುಲದ ಗರ್ಭಗುಡಿ ತೆರೆದಾಗ ಸೋರಿಕೆಯಾಗುತ್ತಿರುವುದು ಗಮನಕ್ಕೆ ಬಂದಿದೆ.

ಗರ್ಭಗುಡಿಯ ಎಡಭಾಗದ ಮಾಳಿಗೆಯಲ್ಲಿ ಸೋರಿಕೆ ಉಂಟಾಗಿದ್ದು, ಶೀಘ್ರವೇ ಅದನ್ನು ದುರಸ್ಥಿಗೊಳಿಸಲಾಗುವುದು.

ಆ.3ರಂದು ದೇಗುಲ ವಾಸ್ತುಶಿಲ್ಪಿಗಳ ತಂಡವು ಪರಿಶೀಲನೆ ನಡೆಸಲಿದೆ. ನಂತರ ದುರಸ್ತಿ ನಡೆಸಲಾಗುವುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಅಧ್ಯಕ್ಷ ಕೆ.ಅನಂತಗೋಪನ್‌ ತಿಳಿಸಿದ್ದಾರೆ.

ಅಯ್ಯಪ್ಪ ದೇಗುಲದ ಗರ್ಭಗುಡಿಯ ಮಾಳಿಗೆಗೆ ಚಿನ್ನದ ಹೊದಿಕೆಯನ್ನು ಪರಾರಿಯಾಗಿರುವ ಉದ್ಯಮಿ ವಿಜಯ್‌ ಮಲ್ಯ 1998ರಲ್ಲಿ ದೇಣಿಗೆಯಾಗಿ ನೀಡಿದ್ದರು.

31ಕೆ.ಜಿ ಚಿನ್ನ ಜತೆ 1900ಕೆ.ಜಿ ತಾಮ್ರವನ್ನು ಕೊಡಲಾಗಿತ್ತು. ಈ ದೇಣಿಗೆಗೆ ಆಗಿನ ಕಾಲದಲ್ಲಿ ಮಲ್ಯ ಅವರಿಗೆ 18 ಕೋಟಿ ರೂ. ವೆಚ್ಚವಾಗಿತ್ತು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ