Breaking News

ಮಂಗಳೂರಿನ ಸುರತ್ಕಲ್ ನಲ್ಲಿ `ಫಾಜಿಲ್’ ಹತ್ಯೆ ಪ್ರಕರಣ : ಇಂದು ನಾಲ್ಕು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Spread the love

ಮಂಗಳೂರು : ಸುರತ್ಕಲ್ ನಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಸುರತ್ಕಲ್ ವ್ಯಾಪ್ತಿಯಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

 

ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಜಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ನಾಲ್ಕು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸುರತ್ಕಲ್, ಪೆಣಂಬೂರು, ಬಜ್ಪೆ, ಮುಲ್ಕಿಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

 

ಫಾಜಿಲ್ ಸುರತ್ಕಲ್ ನ ಬಟ್ಟೆ ಖರೀದಿಗೆಂದು ಅಂಗಡಿಯೊಂದಕ್ಕೆ ತೆರಳಿದ್ದ ಈ ವೇಳೆ ರಾತ್ರಿ 8 ಗಂಟೆ ಸುಮಾರಿಗೆ ಈ ದಾಳಿ ಮಾಡಿ ದುಷ್ಕರ್ಮಿಗಳು ಫಾಜಿಲ್ ನನ್ನು ಹತ್ಯೆ ಮಾಡಿದ್ದಾರೆ.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ