Breaking News

ಅಕ್ರಮ ಸಕ್ರಮದಡಿ ಅರಣ್ಯ ಇಲಾಖೆಯ ಜಮೀನನ್ನು ಪರಿಶಿಷ್ಟ ಜಾತಿ ಕುಟುಂಬಗಳಿಗೆ ನೀಡುವಂತೆ ಆಗ್ರಹ

Spread the love

ಹುಕ್ಕೇರಿ ತಾಲೂಕಿನ ನಾಗನೂರು ಕೆಎಂ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಕುಟಂಬಗಳು ಅರಣ್ಯ ಇಲಾಖೆಗೆ ಸೇರಿದ ಜಮೀನನ್ನು ಕಳೆದ 50 ವರ್ಷಗಳಿಂದ ಸಾಗುವಳಿ ಮಾಡುತ್ತ ಬಂದಿದ್ದು ಸರಕಾರ ಈ ಜಮೀನನ್ನು ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸಕ್ರಮಗೊಳಿಸಬೇಕು ಎಂದು ನಾಗನೂರು ಕೆಎಂ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು.

ಹುಕ್ಕೇರಿ ತಾಲೂಕಿನ ನಾಗನೂರು ಕೆಎಂ ಗ್ರಾಮದಲ್ಲಿ ಸುಮಾರು 30 ಕುಟುಂಬಗಳು ಕಳೆದ 50 ವರ್ಷಗಳಿಂದ ಅರಣ್ಯ ಇಲಾಖೆಗೆ ಸೇರಿದ ಜಮೀನಿನಲ್ಲಿ ಸಾಗುವಳಿ ಮಾಡಿಕೊಂಡು ಬಂದಿದ್ದೇವೆ. ಇನ್ನು ನಮಗೆ ಈ ಭೂಮಿಯನ್ನು ಹೊರತುಪಡಿಸಿ ನಮಗೆ ಬೇರೆ ಯಾವುದೇ ಜಮೀನು ಇರುವುದಿಲ್ಲ. ಹಾಗೂ ನಾವು ಕೂಲಿ ನಾಲಿ ಮಾಡಿಕೊಂಡು ಜೀವನ ಮಾಡುತ್ತಿದ್ದೇವೆ.

ಈ ಕುರಿತಂತೆ ಅರಣ್ಯ ಇಲಾಖೆಯವರು ನಮ್ಮ 13 ಜನರ ಮೇಲೆ ಕೇಸ್ ಹಾಕಿ ಹುಕ್ಕೇರಿ ತಾಲೂಕಾ ನ್ಯಾಯಾಲಯದಲ್ಲಿ ಕೇಸ್ ಹಾಕಿ ನಮಗೆ ದಂಡ ಹಾಗೂ ಶಿಕ್ಷೆಯನ್ನು ವಿಧಿಸಿರುತ್ತಾರೆ. ಹಾಗಾಗಿ ಸರಕಾರ ಈ ಪರಿಶಿಷ್ಟ ಜಾತಿಯವರು ಬಳಕೆ ಮಾಡಿಕೊಂಡು ಬಂದಿರುವ ಜಮೀನನ್ನು ಸಕ್ರಮ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಮಾಡಿದರು.

ಈ ವೇಳೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಗ್ರಾಮಸ್ಥರು, ಸುಮಾರು 30 ಕುಟುಂಬಗಳು ಕಳೆದ 50 ವರ್ಷಗಳಿಂದ ಅರಣ್ಯ ಇಲಾಖೆಗೆ ಸೇರಿದ ಜಮೀನಿನಲ್ಲಿ ಸಾಗುವಳಿ ಮಾಡಿಕೊಂಡು ಬಂದಿದ್ದೇವೆ. ಇನ್ನು ನಮಗೆ ಈ ಭೂಮಿಯನ್ನು ಹೊರತುಪಡಿಸಿ ನಮಗೆ ಬೇರೆ ಯಾವುದೇ ಜಮೀನು ಇರುವುದಿಲ್ಲ. ಹಾಗೂ ನಾವು ಕೂಲಿ ನಾಲಿ ಮಾಡಿಕೊಂಡು ಜೀವನ ಮಾಡುತ್ತಿದ್ದೇವೆ.

ಈ ಕುರಿತಂತೆ ಅರಣ್ಯ ಇಲಾಖೆಯವರು ನಮ್ಮ 13 ಜನರ ಮೇಲೆ ಕೇಸ್ ಹಾಕಿ ಹುಕ್ಕೇರಿ ತಾಲೂಕಾ ನ್ಯಾಯಾಲಯದಲ್ಲಿ ಕೇಸ್ ಹಾಕಿ ನಮಗೆ ದಂಡ ಹಾಗೂ ಶಿಕ್ಷೆಯನ್ನು ವಿಧಿಸಿರುತ್ತಾರೆ. ನಾವು ಇಲ್ಲಿಯವರೆಗೂ ಆ ಜಮೀನಿನಲ್ಲಿಯೇ ದುಡಿಮೆ ಮಾಡುತ್ತ ಬಂದಿದ್ದೇವೆ. ಹಾಗಾಗಿ ಸರಕಾರಗಳು ನಮಗೆ ಈ ಜಮೀನನ್ನು ಸಕ್ರಮ ಮಾಡಿಕೊಡಬೇಕೆಂದು ಮನವಿ ಮಾಡಿದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ