ಹುಕ್ಕೇರಿ ತಾಲೂಕಿನ ನಾಗನೂರು ಕೆಎಂ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಕುಟಂಬಗಳು ಅರಣ್ಯ ಇಲಾಖೆಗೆ ಸೇರಿದ ಜಮೀನನ್ನು ಕಳೆದ 50 ವರ್ಷಗಳಿಂದ ಸಾಗುವಳಿ ಮಾಡುತ್ತ ಬಂದಿದ್ದು ಸರಕಾರ ಈ ಜಮೀನನ್ನು ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸಕ್ರಮಗೊಳಿಸಬೇಕು ಎಂದು ನಾಗನೂರು ಕೆಎಂ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು.
ಹುಕ್ಕೇರಿ ತಾಲೂಕಿನ ನಾಗನೂರು ಕೆಎಂ ಗ್ರಾಮದಲ್ಲಿ ಸುಮಾರು 30 ಕುಟುಂಬಗಳು ಕಳೆದ 50 ವರ್ಷಗಳಿಂದ ಅರಣ್ಯ ಇಲಾಖೆಗೆ ಸೇರಿದ ಜಮೀನಿನಲ್ಲಿ ಸಾಗುವಳಿ ಮಾಡಿಕೊಂಡು ಬಂದಿದ್ದೇವೆ. ಇನ್ನು ನಮಗೆ ಈ ಭೂಮಿಯನ್ನು ಹೊರತುಪಡಿಸಿ ನಮಗೆ ಬೇರೆ ಯಾವುದೇ ಜಮೀನು ಇರುವುದಿಲ್ಲ. ಹಾಗೂ ನಾವು ಕೂಲಿ ನಾಲಿ ಮಾಡಿಕೊಂಡು ಜೀವನ ಮಾಡುತ್ತಿದ್ದೇವೆ.
ಈ ಕುರಿತಂತೆ ಅರಣ್ಯ ಇಲಾಖೆಯವರು ನಮ್ಮ 13 ಜನರ ಮೇಲೆ ಕೇಸ್ ಹಾಕಿ ಹುಕ್ಕೇರಿ ತಾಲೂಕಾ ನ್ಯಾಯಾಲಯದಲ್ಲಿ ಕೇಸ್ ಹಾಕಿ ನಮಗೆ ದಂಡ ಹಾಗೂ ಶಿಕ್ಷೆಯನ್ನು ವಿಧಿಸಿರುತ್ತಾರೆ. ಹಾಗಾಗಿ ಸರಕಾರ ಈ ಪರಿಶಿಷ್ಟ ಜಾತಿಯವರು ಬಳಕೆ ಮಾಡಿಕೊಂಡು ಬಂದಿರುವ ಜಮೀನನ್ನು ಸಕ್ರಮ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಮಾಡಿದರು.
ಈ ವೇಳೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಗ್ರಾಮಸ್ಥರು, ಸುಮಾರು 30 ಕುಟುಂಬಗಳು ಕಳೆದ 50 ವರ್ಷಗಳಿಂದ ಅರಣ್ಯ ಇಲಾಖೆಗೆ ಸೇರಿದ ಜಮೀನಿನಲ್ಲಿ ಸಾಗುವಳಿ ಮಾಡಿಕೊಂಡು ಬಂದಿದ್ದೇವೆ. ಇನ್ನು ನಮಗೆ ಈ ಭೂಮಿಯನ್ನು ಹೊರತುಪಡಿಸಿ ನಮಗೆ ಬೇರೆ ಯಾವುದೇ ಜಮೀನು ಇರುವುದಿಲ್ಲ. ಹಾಗೂ ನಾವು ಕೂಲಿ ನಾಲಿ ಮಾಡಿಕೊಂಡು ಜೀವನ ಮಾಡುತ್ತಿದ್ದೇವೆ.
ಈ ಕುರಿತಂತೆ ಅರಣ್ಯ ಇಲಾಖೆಯವರು ನಮ್ಮ 13 ಜನರ ಮೇಲೆ ಕೇಸ್ ಹಾಕಿ ಹುಕ್ಕೇರಿ ತಾಲೂಕಾ ನ್ಯಾಯಾಲಯದಲ್ಲಿ ಕೇಸ್ ಹಾಕಿ ನಮಗೆ ದಂಡ ಹಾಗೂ ಶಿಕ್ಷೆಯನ್ನು ವಿಧಿಸಿರುತ್ತಾರೆ. ನಾವು ಇಲ್ಲಿಯವರೆಗೂ ಆ ಜಮೀನಿನಲ್ಲಿಯೇ ದುಡಿಮೆ ಮಾಡುತ್ತ ಬಂದಿದ್ದೇವೆ. ಹಾಗಾಗಿ ಸರಕಾರಗಳು ನಮಗೆ ಈ ಜಮೀನನ್ನು ಸಕ್ರಮ ಮಾಡಿಕೊಡಬೇಕೆಂದು ಮನವಿ ಮಾಡಿದರು.