Breaking News

ರೈಲು ಡಿಕ್ಕಿ: ಬೆಳಗಾವಿಯಲ್ಲಿ ವೃದ್ಧ ಸಾವು

Spread the love

ಬೆಳಗಾವಿ: ಇಲ್ಲಿನ ಟಿಳಕವಾಡಿಯ ಮೊದಲನೇ ಗೇಟ್‌ ಬಳಿ ಶನಿವಾರ, ರೈಲು ಡಿಕ್ಕಿ ಹೊಡೆದು ವೃದ್ಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಟಿಳಕವಾಡಿಯ ಸೋಮವಾರಪೇಟೆಯ ನಿವಾಸಿ ಪ್ರಭಾಕರ ಮುಕುಂದ ಕಬ್ಬೆ (86) ಮೃತಪಟ್ಟವರು. ಪ್ರಭಾಕರ ಅವರು ಟಿಳಕವಾಡಿಯಲ್ಲಿರುವ ಮೊದಲನೇ ರೈಲ್ವೆ ಗೇಟ್‌ ದಾಟುತ್ತಿದ್ದರು.

ಅದೇ ಕಾಲಕ್ಕೆ ರೈಲು ವೇಗವಾಗಿ ಬಂತು. ರೈಲಿನ ಶಬ್ದ ಅವರಿಗೆ ಕೇಳಸದ ಕಾರಣ ಹಳಿಗಳಿಂದ ಬೇಗ ಸರಿಯಲಿಲ್ಲ. ನಿಧಾನವಾಗಿ ಹಳಿ ದಾಟುವಷ್ಟರಲ್ಲಿ ರೈಲು ಬಂದು ಡಿಕ್ಕಿ ಹೊಡೆಯಿತು. ತೀವ್ರ ಗಾಯಗೊಂಡ ವೃದ್ಧ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ರೈಲ್ವೆ ಪೊಲೀಸ್‌ ಠಾಣೆಯಲ್ಲಿ ‍ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ