Breaking News

ಸಂಜಯ ರಾವುತ್‌ರನ್ನು ಮುಂಬೈ ನ್ಯಾಯಾಲಯಕ್ಕೆ ಕರೆತಂದ ಇ.ಡಿ ಅಧಿಕಾರಿಗಳು

Spread the love

ಮುಂಬೈ: ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ನಾಯಕ ಸಂಜಯ್‌ ರಾವುತ್‌ ಅವರ ವಿಚಾರಣೆಯು ಮುಂಬೈ ನ್ಯಾಯಾಲಯದಲ್ಲಿ ಸೋಮವಾರ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು(ಇ.ಡಿ) ರಾವುತ್‌ ಅವರನ್ನು ನ್ಯಾಯಾಲಯಕ್ಕೆ ಕರೆತಂದಿದೆ.

ಭೂ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಸಂಜಯ್‌ ನಿವಾಸದಲ್ಲಿ ಭಾನುವಾರ ಬೆಳಿಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಆ ನಂತರ ಅವರನ್ನು ವಶಕ್ಕೆ ಪಡೆದಿದ್ದರು.

ಇದೇ ವೇಳೆ, ರಾವುತ್‌ ಮನೆಗೆ ಭೇಟಿ ನೀಡಿರುವ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್‌ ಠಾಕ್ರೆ ಅವರು ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ್ದಾರೆ.

ಮೂಲಗಳ ಪ್ರಕಾರ, ರಾವುತ್‌ ನಿವಾಸದಿಂದ ₹11.50 ಲಕ್ಷ ಅಕ್ರಮ ನಗದು ಹಣವನ್ನು ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

₹1,034 ಕೋಟಿ ಮೊತ್ತದ ಪತ್ರಾ ಚಾಲ್‌ ಭೂ ಹಗರಣದ ಸುಳಿಯಲ್ಲಿ ರಾವುತ್, ಅವರ ಪತ್ನಿ ಹಾಗೂ ಸ್ನೇಹಿತ ಶಾಮೀಲಾಗಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಗಣಪತಿ ಹಬ್ಬದ ಆಗಮನ — ಗ್ರಾಮೀಣ ಭಾಗದಲ್ಲಿ ಭಕ್ತಿ, ಸಂಭ್ರಮ, ಸಾಂಸ್ಕೃತಿಕ ಚೈತನ್ಯ ಸಾವಳಗಿ

Spread the love ಗಣಪತಿ ಹಬ್ಬದ ಆಗಮನ — ಗ್ರಾಮೀಣ ಭಾಗದಲ್ಲಿ ಭಕ್ತಿ, ಸಂಭ್ರಮ, ಸಾಂಸ್ಕೃತಿಕ ಚೈತನ್ಯ ಸಾವಳಗಿ ರಾಜ್ಯದಾದ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ