Breaking News

ಜೀವಂತ ನಾಗರಹಾವಿಗೆ ಹಾಲೆರೆದು ನಾಗರಪಂಚಮಿ ಆಚರಣೆ

Spread the love

ಹಾವೇರಿ: ಹಾನಗಲ್ ತಾಲೂಕಿನ ಆಡೂರು ಗ್ರಾಮದಲ್ಲಿ ಜೀವಂತ ನಾಗರಹಾವಿಗೆ ಹಾಲೆರೆಯುವ ಮೂಲಕ ನಾಗರಪಂಚಮಿ ಆಚರಣೆ ನಡೆಯಿತು.

ಆಡೂರು ಪಕ್ಕದ ಗ್ರಾಮದಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಉರಗಪ್ರೇಮಿ ಕೃಷ್ಣರೆಡ್ಡಿಗೆ ತಿಳಿಸಿದ್ದರು. ಸ್ಥಳಕ್ಕೆ ಬಂದ ಕೃಷ್ಣರೆಡ್ಡಿ ನಾಗರಹಾವು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡಲು ಹೋದಾಗ ಆಡೂರು ಗ್ರಾಮದ ಮಹಿಳೆಯರು ನಾಗರಪಂಚಮಿ ಆಚರಿಸುತ್ತಿದ್ದರು.

ತಮ್ಮ ಮುಂದೆ ಜೀವಂತ ಹಾವು ಹಿಡಿದು ಹೋಗುತ್ತಿದ್ದ ಅವರಿಗೆ ಸ್ವಲ್ಪ ಹೊತ್ತು ಹಾವು ಬಿಡುವಂತೆ ತಿಳಿಸಿದ್ದಾರೆ. ನಾಗರಹಾವು ನೆಲದ ಮೇಲೆ ಹರಿದಾಡುತ್ತಿದ್ದಂತೆ ಮಹಿಳೆಯರು ಹಾಲು ಸುರಿದು ಜೀವಂತ ನಾಗಪ್ಪಗೆ ಪೂಜೆ ಸಲ್ಲಿಸಿದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ