Breaking News

ಪ್ರವೀಣ್ ನೆಟ್ಟಾರು ಕೊಂದು ಬೆಂಗಳೂರಿನಲ್ಲಿ ಬಚ್ಚಿಟ್ಟುಕೊಂಡಿದ್ದ ಹಂತಕರು..!

Spread the love

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಸೋಮವಾರ ಬಂಧನವಾಗಿರುವ ಇಬ್ಬರು ಆರೋಪಿಗಳು ಹಲವು ವರ್ಷಗಳಿಂದ ಬೆಂಗಳೂರಿನ ಬೇಕರಿಯಲ್ಲಿಯೇ ಕೆಲಸ ಮಾಡಿಕೊಂಡಿದ್ದರು ಎಂಬುದು ತಿಳಿದುಬಂದಿದೆ.

ಮಾನ್ಯತಾ ಟೆಕ್‌ಪಾರ್ಕ್ ಬಳಿಯ ಬೇಕರಿಯಲ್ಲಿ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಗಳಾದ ಅಲ್ತಾಫ್ ಹಾಗೂ ಇರ್ಫಾನ್ ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ ನಡೆಸಿ, ತಲೆಮರೆಸಿಕೊಳ್ಳಲು ವಾಪಸ್ ಬೆಂಗಳೂರಿಗೆ ಬಂದಿದ್ದರು. ಬಳಿಕ ಏನೂ ಗೊತ್ತಿಲ್ಲದವರಂತೆ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ.

ಮೂಲತಃ ಸುಳ್ಯ ಮೂಲದ ಅಲ್ತಾಫ್ ಹಾಗೂ ಇರ್ಪಾನ್ ಸಾಕಷ್ಟು ವರ್ಷಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಪ್ರವೀಣ್ ಹತ್ಯೆ ದಿನ ಆರೋಪಿಗಳು ಬೆಳ್ಳಾರೆಯಲ್ಲಿಯೇ ಇದ್ದು, ಬಳಿಕ ಬೆಂಗಳೂರಿಗೆ ಬಂದು ತಲೆಮರೆಸಿಕೊಂಡಿದ್ದರು.


Spread the love

About Laxminews 24x7

Check Also

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ ಹೆಚ್ಚಳ: ಸಿಎಂ ಸಮರ್ಥನೆ

Spread the loveಬೆಂಗಳೂರು: “ವಸತಿ ಮೀಸಲಾತಿ ಹೆಚ್ಚಳ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ