Breaking News
Home / ಹುಬ್ಬಳ್ಳಿ / ಚುನಾವಣಾ ಪೂರ್ವ ತಂತ್ರಗಾರಿಕೆ: ಒಗ್ಗಟ್ಟಿನಿಂದ ಮುಂದೆ ಸಾಗುವಂತೆ ಕೈ ನಾಯಕರಿಗೆ ರಾಹುಲ್ ಸಲಹೆ

ಚುನಾವಣಾ ಪೂರ್ವ ತಂತ್ರಗಾರಿಕೆ: ಒಗ್ಗಟ್ಟಿನಿಂದ ಮುಂದೆ ಸಾಗುವಂತೆ ಕೈ ನಾಯಕರಿಗೆ ರಾಹುಲ್ ಸಲಹೆ

Spread the love

ಹುಬ್ಬಳ್ಳಿ: ಪ್ರಸ್ತುತ ರಾಜಕೀಯ ಬೆಳವಣಿಗೆ ಹಾಗೂ ಮುಂದಿ‌ನ ಚುನಾವಣಾ ಕಾರ್ಯತಂತ್ರಗಳ ಕುರಿತಂತೆ ಚರ್ಚಿಸಲು ನಗರದ ಖಾಸಗಿ ಹೋಟೆಲ್​ನಲ್ಲಿ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಯಿತು.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮತ್ತಿತರ ಮುಖಂಡರು, ಹಾಲಿ ಮತ್ತು ಮಾಜಿ ಶಾಸಕರು, ಎಂಎಲ್​ಸಿಗಳು ಭಾಗವಹಿಸಿದ್ದರು. ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಮುಂದೆ ಸಾಗಬೇಕು ಎಂದು ರಾಹುಲ್ ಗಾಂಧಿ ಸಲಹೆ ನೀಡಿದರು ಎನ್ನಲಾಗಿದೆ.

ಬಳಿಕ ಸುದ್ದಿಗೊಷ್ಠಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಹುಬ್ಬಳ್ಳಿ ಕರ್ನಾಟಕ ಕಾಂಗ್ರೆಸ್ ಒಟ್ಟಿನಿಂದ ಮುಂದಿನ ಚುನಾವಣೆ ಎದುರಸಲಿದೆ. ಕಾಂಗ್ರೆಸ್ ಪಾರ್ಟಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಕರ್ನಾಟಕ ಕಾಂಗ್ರೆಸ್ ಒಟ್ಟಿನಿಂದ ಮುಂದಿನ ಚುನಾವಣೆ ಎದುರಸಲಿದೆ. ಸಭೆಯಲ್ಲಿ ಪಕ್ಷದ ಸ‌ಂಘಟನೆ ಬಗ್ಗೆ ಸಾಕಷ್ಟು ಚರ್ಚೆ ನಡೆಸಿದ್ದೇವೆ ಎಂದರು.


Spread the love

About Laxminews 24x7

Check Also

ರೇಣುಕಸ್ವಾಮಿ ಕೊಲೆ ಪ್ರಕರಣ| ಕಲಾವಿದರ ವ್ಯಕ್ತಿತ್ವ ಮಾದರಿಯಾಗಿರಲಿ: ಕೂಡಲಸಂಗಮಶ್ರೀ

Spread the loveರೇಣುಕಸ್ವಾಮಿ ಕೊಲೆ ಪ್ರಕರಣ| ಕಲಾವಿದರ ವ್ಯಕ್ತಿತ್ವ ಮಾದರಿಯಾಗಿರಲಿ: ಕೂಡಲಸಂಗಮಶ್ರೀ   ಅಥಣಿ : ‘ಯಾವುದೇ ಕಲಾವಿದರು ಜನರಿಗೆ ಮಾದರಿಯಾಗುವಂಥ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ