ಬೆಂಗಳೂರು: ದಾವಣಗೆರೆಯಲ್ಲಿ ಇಂದು ನಡೆಯುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳನ್ನು ಎರವಲು ಸೇವೆಗೆ ನೀಡಿದ್ದು, ಇದರಿಂದ ಇಂದು ನಗರದಲ್ಲಿ ಬಸ್ ಪ್ರಯಾಣಿಕರಿಗೆ ತೊಂದರೆ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ.
ನಿನ್ನೆ ಮಧ್ಯಾಹ್ನವೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 700ಕ್ಕೂ ಹೆಚ್ಚು ಬಸ್ಸುಗಳು ದಾವಣಗೆರೆಯತ್ತ ಸಿದ್ದರಾಮಯ್ಯ ಅಭಿಮಾನಿಗಳನ್ನ ಕರೆದುಕೊಂಡು ತೆರಳಿದೆ. ಸಮಾರಂಭದ ಆಯೋಜಕರು ಈ ಬಸ್ಗಳನ್ನು ಗುತ್ತಿಗೆ ರೂಪದಲ್ಲಿ ಪಡೆದಿದ್ದು, ಇಂದು ರಾತ್ರಿ ವೇಳೆಗೆ ವಾಪಸ್ ಆಗಲಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ನಗರ ಕೇಂದ್ರದಿಂದ ವಿವಿಧ ಜಿಲ್ಲಾ ಕೇಂದ್ರಗಳಿಗೆ ತೆರಳುವ ಪ್ರಯಾಣಿಕರಿಗೆ ಇಂದು ಬಸ್ ಲಭ್ಯತೆ ಸಮರ್ಪಕವಾಗಿ ಸಿಗುವ ಸಾಧ್ಯತೆ ಕಡಿಮೆ ಇದೆ.
ನಿನ್ನೆ ಮಧ್ಯಾಹ್ನವೇ ಬಹುತೇಕ ಬಸ್ಗಳು ದಾವಣಗೆರೆಯತ್ತ ಪ್ರಯಾಣ ಬೆಳೆಸಿದ್ದರಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಭಾಗಗಳಿಗೆ ತೆರಳುವ ಪ್ರಯಾಣಿಕರಿಗೆ ಬಸ್ಗಳ ಕೊರತೆ ಎದುರಾಗಿತ್ತು. ಮಧ್ಯಾಹ್ನದ ನಂತರ ಹಲವಡೆಗಳಿಗೆ ಬಸ್ ಸಂಪರ್ಕ ಲಭಿಸಲಿಲ್ಲ. ಇದೇ ಸ್ಥಿತಿ ಇಂದು ಸಹ ಮುಂದುವರೆಯಲಿದ್ದು, ಬಸ್ಗಳನ್ನೇ ಅವಲಂಬಿಸಿರುವ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುವುದು ಶತಸಿದ್ಧ.
Laxmi News 24×7