Breaking News

ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಕೆಎಸ್ಆರ್​ಟಿಸಿ ಬಸ್​ಗಳನ್ನು ಎರವಲು ಸೇವೆ ನೀಡಿದ್ದರಿಂದ ಇಂದು ಬಸ್ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ

Spread the love

ಬೆಂಗಳೂರು: ದಾವಣಗೆರೆಯಲ್ಲಿ ಇಂದು ನಡೆಯುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​ಗಳನ್ನು ಎರವಲು ಸೇವೆಗೆ ನೀಡಿದ್ದು, ಇದರಿಂದ ಇಂದು ನಗರದಲ್ಲಿ ಬಸ್ ಪ್ರಯಾಣಿಕರಿಗೆ ತೊಂದರೆ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ.

ನಿನ್ನೆ ಮಧ್ಯಾಹ್ನವೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 700ಕ್ಕೂ ಹೆಚ್ಚು ಬಸ್ಸುಗಳು ದಾವಣಗೆರೆಯತ್ತ ಸಿದ್ದರಾಮಯ್ಯ ಅಭಿಮಾನಿಗಳನ್ನ ಕರೆದುಕೊಂಡು ತೆರಳಿದೆ. ಸಮಾರಂಭದ ಆಯೋಜಕರು ಈ ಬಸ್​ಗಳನ್ನು ಗುತ್ತಿಗೆ ರೂಪದಲ್ಲಿ ಪಡೆದಿದ್ದು, ಇಂದು ರಾತ್ರಿ ವೇಳೆಗೆ ವಾಪಸ್​ ಆಗಲಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ನಗರ ಕೇಂದ್ರದಿಂದ ವಿವಿಧ ಜಿಲ್ಲಾ ಕೇಂದ್ರಗಳಿಗೆ ತೆರಳುವ ಪ್ರಯಾಣಿಕರಿಗೆ ಇಂದು ಬಸ್ ಲಭ್ಯತೆ ಸಮರ್ಪಕವಾಗಿ ಸಿಗುವ ಸಾಧ್ಯತೆ ಕಡಿಮೆ ಇದೆ.

ನಿನ್ನೆ ಮಧ್ಯಾಹ್ನವೇ ಬಹುತೇಕ ಬಸ್​​​ಗಳು ದಾವಣಗೆರೆಯತ್ತ ಪ್ರಯಾಣ ಬೆಳೆಸಿದ್ದರಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಭಾಗಗಳಿಗೆ ತೆರಳುವ ಪ್ರಯಾಣಿಕರಿಗೆ ಬಸ್​ಗಳ ಕೊರತೆ ಎದುರಾಗಿತ್ತು. ಮಧ್ಯಾಹ್ನದ ನಂತರ ಹಲವಡೆಗಳಿಗೆ ಬಸ್ ಸಂಪರ್ಕ ಲಭಿಸಲಿಲ್ಲ. ಇದೇ ಸ್ಥಿತಿ ಇಂದು ಸಹ ಮುಂದುವರೆಯಲಿದ್ದು, ಬಸ್​ಗಳನ್ನೇ ಅವಲಂಬಿಸಿರುವ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುವುದು ಶತಸಿದ್ಧ.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ